<p>ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪಕ್ಷೇತರ ಸದಸ್ಯ ಸುಬ್ರಹ್ಮಣ್ಯಾಚಾರಿ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರ ಆಯ್ಕೆಗೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಸುಬ್ರಹ್ಮಣ್ಯಾಚಾರಿಯೇ ಅಧ್ಯಕ್ಷರಾಗುವ ನಿರೀಕ್ಷೆ ಇತ್ತು. </p>.<p>12 ವರ್ಷಗಳ ನಂತರ ಚಿಕ್ಕಬಳ್ಳಾಪುರ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. 2013ರ ತರುವಾಯ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಯೇ ನಡೆದಿರಲಿಲ್ಲ.</p>.<p>ಜು.22ರಂದು ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು ಮತ್ತು ಪೌರಾಯುಕ್ತರ ಸಮ್ಮುಖದಲ್ಲಿ 11 ನಗರಸಭಾ ಸದಸ್ಯರ ಹೆಸರನ್ನು ಸ್ಥಾಯಿ ಸಮಿತಿಗೆ ಆಯ್ಕೆ ಮಾಡಲಾಗಿತ್ತು. ಎಲ್ಲ ಸದಸ್ಯರು ಸರ್ವಾನುಮತದಿಂದ ತೀರ್ಮಾನಿಸಿದ್ದರು. ಈ ಆಯ್ಕೆಯಾದ ಸದಸ್ಯರನ್ನು ಪೌರಾಯುಕ್ತರು ಸಭೆ ಓದಿ, ಸಭೆಯಲ್ಲಿ ರೆಕಾರ್ಡ್ ಸಹ ಮಾಡಿದ್ದರು.</p>.<p>ಈ ನಡುವೆ ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಮತ್ತು ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಡಿ.ಎಸ್.ಆನಂದರೆಡ್ಡಿ ಬಾಬು ಸಹ ಸ್ಥಾಯಿ ಸಮಿತಿ ಸದಸ್ಯರ ಪಟ್ಟಿಯನ್ನು ಪೌರಾಯುಕ್ತರಿಗೆ ನೀಡಿದ್ದರು. ಸಾಮಾನ್ಯ ಸಭೆಯಲ್ಲಿ ರೆಕಾರ್ಡ್ ಮಾಡಿರುವ ಪಟ್ಟಿಯೇ ಅಂತಿಮ ಎಂದು ಪೌರಾಯುಕ್ತರು ತಿಳಿಸಿದ್ದರು. ಈ ಎಲ್ಲ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ವಿಚಾರವು ಕುತೂಹಲಕ್ಕೆ ಕಾರಣವಾಗಿತ್ತು. </p>.<p>ಸ್ಥಾಯಿ ಸಮಿತಿ ರಚನೆ ವಿಚಾರವು ಆಡಳಿತ ಪಕ್ಷದ ಸದಸ್ಯರ ನಡುವೆ ಜಟಾಪಟಿಗೆ ನಡೆದ ನಂತರ ಸಂಸದ ಡಾ.ಕೆ. ಸುಧಾಕರ್ ರಂಗಪ್ರವೇಶಿಸಿದ್ದರು. ಸದಸ್ಯರ ಸಭೆ ನಡೆಸಿ ಸುಬ್ರಹ್ಮಣ್ಯಾಚಾರಿ ಅವರನ್ನು ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ತೀರ್ಮಾನಿಸಿದ್ದರು.</p>.<p>ಡಿ.ಎಸ್.ಆನಂದರೆಡ್ಡಿ ಬಾಬು, ಸತೀಶ್, ಮಂಜುನಾಥ್ ಸೇರಿದಂತೆ ಸ್ಥಾಯಿ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪಕ್ಷೇತರ ಸದಸ್ಯ ಸುಬ್ರಹ್ಮಣ್ಯಾಚಾರಿ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರ ಆಯ್ಕೆಗೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಸುಬ್ರಹ್ಮಣ್ಯಾಚಾರಿಯೇ ಅಧ್ಯಕ್ಷರಾಗುವ ನಿರೀಕ್ಷೆ ಇತ್ತು. </p>.<p>12 ವರ್ಷಗಳ ನಂತರ ಚಿಕ್ಕಬಳ್ಳಾಪುರ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. 2013ರ ತರುವಾಯ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಯೇ ನಡೆದಿರಲಿಲ್ಲ.</p>.<p>ಜು.22ರಂದು ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು ಮತ್ತು ಪೌರಾಯುಕ್ತರ ಸಮ್ಮುಖದಲ್ಲಿ 11 ನಗರಸಭಾ ಸದಸ್ಯರ ಹೆಸರನ್ನು ಸ್ಥಾಯಿ ಸಮಿತಿಗೆ ಆಯ್ಕೆ ಮಾಡಲಾಗಿತ್ತು. ಎಲ್ಲ ಸದಸ್ಯರು ಸರ್ವಾನುಮತದಿಂದ ತೀರ್ಮಾನಿಸಿದ್ದರು. ಈ ಆಯ್ಕೆಯಾದ ಸದಸ್ಯರನ್ನು ಪೌರಾಯುಕ್ತರು ಸಭೆ ಓದಿ, ಸಭೆಯಲ್ಲಿ ರೆಕಾರ್ಡ್ ಸಹ ಮಾಡಿದ್ದರು.</p>.<p>ಈ ನಡುವೆ ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಮತ್ತು ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಡಿ.ಎಸ್.ಆನಂದರೆಡ್ಡಿ ಬಾಬು ಸಹ ಸ್ಥಾಯಿ ಸಮಿತಿ ಸದಸ್ಯರ ಪಟ್ಟಿಯನ್ನು ಪೌರಾಯುಕ್ತರಿಗೆ ನೀಡಿದ್ದರು. ಸಾಮಾನ್ಯ ಸಭೆಯಲ್ಲಿ ರೆಕಾರ್ಡ್ ಮಾಡಿರುವ ಪಟ್ಟಿಯೇ ಅಂತಿಮ ಎಂದು ಪೌರಾಯುಕ್ತರು ತಿಳಿಸಿದ್ದರು. ಈ ಎಲ್ಲ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ವಿಚಾರವು ಕುತೂಹಲಕ್ಕೆ ಕಾರಣವಾಗಿತ್ತು. </p>.<p>ಸ್ಥಾಯಿ ಸಮಿತಿ ರಚನೆ ವಿಚಾರವು ಆಡಳಿತ ಪಕ್ಷದ ಸದಸ್ಯರ ನಡುವೆ ಜಟಾಪಟಿಗೆ ನಡೆದ ನಂತರ ಸಂಸದ ಡಾ.ಕೆ. ಸುಧಾಕರ್ ರಂಗಪ್ರವೇಶಿಸಿದ್ದರು. ಸದಸ್ಯರ ಸಭೆ ನಡೆಸಿ ಸುಬ್ರಹ್ಮಣ್ಯಾಚಾರಿ ಅವರನ್ನು ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ತೀರ್ಮಾನಿಸಿದ್ದರು.</p>.<p>ಡಿ.ಎಸ್.ಆನಂದರೆಡ್ಡಿ ಬಾಬು, ಸತೀಶ್, ಮಂಜುನಾಥ್ ಸೇರಿದಂತೆ ಸ್ಥಾಯಿ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>