<p>ಚಿಂತಾಮಣಿ: ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಬುಧವಾರ ತಡರಾತ್ರಿ ಮುಕ್ತಾಯವಾಗಿದ್ದು, ಮಾಜಿ ಶಾಸಕ ಡಾ.ಎಂ.ಸಿ. ಸುಧಾಕರ್ ಬೆಂಬಲಿಗರು ಮೇಲುಗೈ ಸಾಧಿಸಿದ್ದಾರೆ.</p>.<p>ಮೂರನೇ ಎರಡು ಭಾಗದಷ್ಟು ಗ್ರಾಮ ಪಂಚಾಯಿತಿಗಳು ಸುಧಾಕರ್ ಬಣದ ಬೆಂಬಲಿಗರ ಪಾಲಾಗಿವೆ. ಚಿಂತಾಮಣಿ ವಿಧಾನಸಭಾ ಕ್ಷೇತ್ರದ 29 ಗ್ರಾಮ ಪಂಚಾಯಿತಿಗಳಲ್ಲಿ 20 ಗ್ರಾಮ ಪಂಚಾಯಿತಿಗಳು ಸುಧಾಕರ್ ಬಣಕ್ಕೆ, 8 ಗ್ರಾಮ ಪಂಚಾಯಿತಿಗಳು ಜೆಡಿಎಸ್ ಬೆಂಬಲಿಗರ ವಶವಾಗಿವೆ.</p>.<p>ಚಿನ್ನಸಂದ್ರ ಗ್ರಾಮ ಪಂಚಾಯಿತಿಯಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುಲ್ತಾನ್ ಷರೀಫ್ ನೇತೃತ್ವದ ಸಿಂಡಿಕೇಟ್ ಪ್ರತ್ಯೇಕವಾಗಿ ಸ್ಪರ್ಧಿಸಿ ಜಯಗಳಿಸಿದೆ. ಶಿಡ್ಲಘಟ್ಟ ವಿಧಾನ ಕ್ಷೇತ್ರದ ವ್ಯಾಪ್ತಿಯ 6 ಗ್ರಾಮ ಪಂಚಾಯಿತಿಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿಗರು ಸಮಬಲ ಸಾಧಿಸಿ ತಲಾ 3 ಗ್ರಾಮ ಪಂಚಾಯಿತಿಗಳ ಅಧಿಕಾರ ಹಿಡಿಯಲು ಸಜ್ಜಾಗಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಚುನಾವಣೆಗಳು ಪಕ್ಷದ ಚಿಹ್ನೆಯ ಮೇಲೆ ನಡೆಯುವುದಿಲ್ಲ. ಸರ್ಕಾರ ಇನ್ನೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕಟಿಸಿಲ್ಲ. ಮೀಸಲಾತಿ ಪ್ರಕಟವಾದ ನಂತರ ಆಯಾರಾಂ-ಗಯಾರಾಂ ಸಾಧ್ಯತೆಯೂ ಇದೆ. ಹೀಗಾಗಿ ಈ ಅಂಕಿಗಳು ಬದಲಾವಣೆಯಾಗುವ ಸಾಧ್ಯತೆಯೂ ಇದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ಒಂದು ಪಂಚಾಯಿತಿಯಲ್ಲೂ ಮೇಲುಗೈ ಸಾಧಿಸಿಲ್ಲ.</p>.<p>ತಾಲ್ಲೂಕಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮರ್ಥ ನಾಯಕತ್ವವಿಲ್ಲದೆ, ನಾವಿಕನಿಲ್ಲದ ಹಡಗಿನಂತಾಗಿವೆ. ಕಾಂಗ್ರೆಸ್, ಜೆಡಿಎಸ್ನೊಂದಿಗೆ ಅನಧಿಕೃತ ಮೈತ್ರಿ ಮಾಡಿಕೊಂಡಿದೆ. ಬಿಜೆಪಿ ಬೆಂಬಲಿತರು 7 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಚಿಂತಾಮಣಿ ವಿಧಾನಸಭಾ ಕ್ಷೇತ್ರದ 466 ಸ್ಥಾನಗಳಲ್ಲಿ ಎಂ.ಸಿ. ಸುಧಾಕರ್ ಬಣ 230, ಜೆಡಿಎಸ್ 180 ಬಿಜೆಪಿ 7, ಇತರರು 29 ಸ್ಥಾನಗಳಲ್ಲಿ ಜಯಭೇರಿ<br />ಬಾರಿಸಿದ್ದಾರೆ.</p>.<p>ಮಿಂಡಿಗಲ್ ಗ್ರಾಮ ಪಂಚಾಯಿತಿಯ ಗುಡಿಸಲಹಳ್ಳಿ ಕ್ಷೇತ್ರದಲ್ಲಿ ಅಭ್ಯರ್ಥಿ ವೆಂಕಟರಮಣಪ್ಪ ಪ್ರತಿಸ್ಪರ್ಧಿ ನರೇಶ್ ವಿರುದ್ಧ ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ.</p>.<p>ಕುಟುಂಬದ ಬಿಗಿಹಿಡಿತ: ತಾಲ್ಲೂಕಿನ ಕಾಗತಿ ಗ್ರಾಮ ಪಂಚಾಯಿತಿಯ ಬುಕ್ಕನಹಳ್ಳಿ ಕ್ಷೇತ್ರದಿಂದ ಕಳೆದ 25 ವರ್ಷಗಳಿಂದ ಒಂದೇ ಕುಟುಂಬದವರು ಜಯಗಳಿಸುವ ಮೂಲಕ ದಾಖಲೆ ಬರೆದಿದ್ದಾರೆ.</p>.<p>ಬುಕ್ಕನಹಳ್ಳಿ ಶಿವಣ್ಣನ ಮಾವ ಶ್ರೀನಿವಾಸರೆಡ್ಡಿ 1994 ಮತ್ತು 2000ರಲ್ಲಿ ನಡೆದ ಚುನಾವಣೆಯಲ್ಲಿ ಜಯಗಳಿಸಿದ್ದರು. ನಂತರ 2005, 2010ರಲ್ಲಿ ಶಿವಣ್ಣ ಗೆಲುವು ಸಾಧಿಸಿ ಕಾಗತಿ ಗ್ರಾಮ ಪಂಚಾಯಿತಿಯಲ್ಲಿ ಮೂರು ಬಾರಿ ಉಪಾಧ್ಯಕ್ಷ ಮತ್ತು ಎರಡು ಬಾರಿ ಅಧ್ಯಕ್ಷರಾಗಿದ್ದರು.</p>.<p>2015 ಮತ್ತು 2020ರಲ್ಲಿ ಶಿವಣ್ಣ ಅವರ ಪತ್ನಿ ಬಿ.ಜಿ. ರಾಧಮ್ಮ ಆಯ್ಕೆಯಾಗಿದ್ದಾರೆ. ಹೀಗಾಗಿ ಕಳೆದ ಎರಡೂವರೆ ದಶಕಗಳಿಂದ ಒಂದೇ ಕುಟುಂಬದವರು ಆಯ್ಕೆಯಾಗುತ್ತಿರುವುದು ತಾಲ್ಲೂಕಿನಲ್ಲಿ ದಾಖಲೆಯಾಗಿದೆ. 2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಊಲವಾಡಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಶಿವಣ್ಣ ಆಯ್ಕೆಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಬುಧವಾರ ತಡರಾತ್ರಿ ಮುಕ್ತಾಯವಾಗಿದ್ದು, ಮಾಜಿ ಶಾಸಕ ಡಾ.ಎಂ.ಸಿ. ಸುಧಾಕರ್ ಬೆಂಬಲಿಗರು ಮೇಲುಗೈ ಸಾಧಿಸಿದ್ದಾರೆ.</p>.<p>ಮೂರನೇ ಎರಡು ಭಾಗದಷ್ಟು ಗ್ರಾಮ ಪಂಚಾಯಿತಿಗಳು ಸುಧಾಕರ್ ಬಣದ ಬೆಂಬಲಿಗರ ಪಾಲಾಗಿವೆ. ಚಿಂತಾಮಣಿ ವಿಧಾನಸಭಾ ಕ್ಷೇತ್ರದ 29 ಗ್ರಾಮ ಪಂಚಾಯಿತಿಗಳಲ್ಲಿ 20 ಗ್ರಾಮ ಪಂಚಾಯಿತಿಗಳು ಸುಧಾಕರ್ ಬಣಕ್ಕೆ, 8 ಗ್ರಾಮ ಪಂಚಾಯಿತಿಗಳು ಜೆಡಿಎಸ್ ಬೆಂಬಲಿಗರ ವಶವಾಗಿವೆ.</p>.<p>ಚಿನ್ನಸಂದ್ರ ಗ್ರಾಮ ಪಂಚಾಯಿತಿಯಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುಲ್ತಾನ್ ಷರೀಫ್ ನೇತೃತ್ವದ ಸಿಂಡಿಕೇಟ್ ಪ್ರತ್ಯೇಕವಾಗಿ ಸ್ಪರ್ಧಿಸಿ ಜಯಗಳಿಸಿದೆ. ಶಿಡ್ಲಘಟ್ಟ ವಿಧಾನ ಕ್ಷೇತ್ರದ ವ್ಯಾಪ್ತಿಯ 6 ಗ್ರಾಮ ಪಂಚಾಯಿತಿಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿಗರು ಸಮಬಲ ಸಾಧಿಸಿ ತಲಾ 3 ಗ್ರಾಮ ಪಂಚಾಯಿತಿಗಳ ಅಧಿಕಾರ ಹಿಡಿಯಲು ಸಜ್ಜಾಗಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಚುನಾವಣೆಗಳು ಪಕ್ಷದ ಚಿಹ್ನೆಯ ಮೇಲೆ ನಡೆಯುವುದಿಲ್ಲ. ಸರ್ಕಾರ ಇನ್ನೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಪ್ರಕಟಿಸಿಲ್ಲ. ಮೀಸಲಾತಿ ಪ್ರಕಟವಾದ ನಂತರ ಆಯಾರಾಂ-ಗಯಾರಾಂ ಸಾಧ್ಯತೆಯೂ ಇದೆ. ಹೀಗಾಗಿ ಈ ಅಂಕಿಗಳು ಬದಲಾವಣೆಯಾಗುವ ಸಾಧ್ಯತೆಯೂ ಇದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ಒಂದು ಪಂಚಾಯಿತಿಯಲ್ಲೂ ಮೇಲುಗೈ ಸಾಧಿಸಿಲ್ಲ.</p>.<p>ತಾಲ್ಲೂಕಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸಮರ್ಥ ನಾಯಕತ್ವವಿಲ್ಲದೆ, ನಾವಿಕನಿಲ್ಲದ ಹಡಗಿನಂತಾಗಿವೆ. ಕಾಂಗ್ರೆಸ್, ಜೆಡಿಎಸ್ನೊಂದಿಗೆ ಅನಧಿಕೃತ ಮೈತ್ರಿ ಮಾಡಿಕೊಂಡಿದೆ. ಬಿಜೆಪಿ ಬೆಂಬಲಿತರು 7 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಚಿಂತಾಮಣಿ ವಿಧಾನಸಭಾ ಕ್ಷೇತ್ರದ 466 ಸ್ಥಾನಗಳಲ್ಲಿ ಎಂ.ಸಿ. ಸುಧಾಕರ್ ಬಣ 230, ಜೆಡಿಎಸ್ 180 ಬಿಜೆಪಿ 7, ಇತರರು 29 ಸ್ಥಾನಗಳಲ್ಲಿ ಜಯಭೇರಿ<br />ಬಾರಿಸಿದ್ದಾರೆ.</p>.<p>ಮಿಂಡಿಗಲ್ ಗ್ರಾಮ ಪಂಚಾಯಿತಿಯ ಗುಡಿಸಲಹಳ್ಳಿ ಕ್ಷೇತ್ರದಲ್ಲಿ ಅಭ್ಯರ್ಥಿ ವೆಂಕಟರಮಣಪ್ಪ ಪ್ರತಿಸ್ಪರ್ಧಿ ನರೇಶ್ ವಿರುದ್ಧ ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ದಾರೆ.</p>.<p>ಕುಟುಂಬದ ಬಿಗಿಹಿಡಿತ: ತಾಲ್ಲೂಕಿನ ಕಾಗತಿ ಗ್ರಾಮ ಪಂಚಾಯಿತಿಯ ಬುಕ್ಕನಹಳ್ಳಿ ಕ್ಷೇತ್ರದಿಂದ ಕಳೆದ 25 ವರ್ಷಗಳಿಂದ ಒಂದೇ ಕುಟುಂಬದವರು ಜಯಗಳಿಸುವ ಮೂಲಕ ದಾಖಲೆ ಬರೆದಿದ್ದಾರೆ.</p>.<p>ಬುಕ್ಕನಹಳ್ಳಿ ಶಿವಣ್ಣನ ಮಾವ ಶ್ರೀನಿವಾಸರೆಡ್ಡಿ 1994 ಮತ್ತು 2000ರಲ್ಲಿ ನಡೆದ ಚುನಾವಣೆಯಲ್ಲಿ ಜಯಗಳಿಸಿದ್ದರು. ನಂತರ 2005, 2010ರಲ್ಲಿ ಶಿವಣ್ಣ ಗೆಲುವು ಸಾಧಿಸಿ ಕಾಗತಿ ಗ್ರಾಮ ಪಂಚಾಯಿತಿಯಲ್ಲಿ ಮೂರು ಬಾರಿ ಉಪಾಧ್ಯಕ್ಷ ಮತ್ತು ಎರಡು ಬಾರಿ ಅಧ್ಯಕ್ಷರಾಗಿದ್ದರು.</p>.<p>2015 ಮತ್ತು 2020ರಲ್ಲಿ ಶಿವಣ್ಣ ಅವರ ಪತ್ನಿ ಬಿ.ಜಿ. ರಾಧಮ್ಮ ಆಯ್ಕೆಯಾಗಿದ್ದಾರೆ. ಹೀಗಾಗಿ ಕಳೆದ ಎರಡೂವರೆ ದಶಕಗಳಿಂದ ಒಂದೇ ಕುಟುಂಬದವರು ಆಯ್ಕೆಯಾಗುತ್ತಿರುವುದು ತಾಲ್ಲೂಕಿನಲ್ಲಿ ದಾಖಲೆಯಾಗಿದೆ. 2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಊಲವಾಡಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಶಿವಣ್ಣ ಆಯ್ಕೆಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>