‘ಮಾನ್ಯ, ದಿನೇಶ್ ಗುಂಡೂರಾವ್ ಅವರೇ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿತು. ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನಗಳನ್ನು ಗೆದ್ದಿದ್ದೆವು’ ಎಂದು ಸುಧಾಕರ್ ಅವರು ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.