<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿ ಸೋಮವಾರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಸುಸೂತ್ರವಾಗಿ ನಡೆದವು. ಒಟ್ಟು 11 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಪರೀಕ್ಷೆಗಾಗಿ 8 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ.</p>.<p>ಸೋಮವಾರ ಬೆಳಿಗ್ಗೆ 10.15 ರಿಂದ 1.30ರ ವರೆಗೆ ಉರ್ದು ಮತ್ತು ಸಂಸ್ಕೃತ, ಮಧ್ಯಾಹ್ನ 2.15 ರಿಂದ 5.30ರ ವರೆಗೆ ಪರೀಕ್ಷೆಗಳು ನಡೆದವು. ಜಿಲ್ಲೆಯಲ್ಲಿ ಉರ್ದು ಪರೀಕ್ಷೆಗೆ 8 ಅಭ್ಯರ್ಥಿಗಳು, ಉರ್ದು ಪರೀಕ್ಷೆಗೆ ಒಬ್ಬ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಪರೀಕ್ಷೆಗೆ ಇಬ್ಬರು ಹೆಸರು ನೋಂದಾಯಿಸಿಕೊಂಡಿದ್ದರು. ಮೊದಲ ದಿನದ ಪರೀಕ್ಷೆಗೆ ಎಲ್ಲರೂ ಪರೀಕ್ಷೆಗೆ ಹಾಜರಾದರು.</p>.<p>ಜಿಲ್ಲೆಯಲ್ಲಿ ಪೂರಕ ಪರೀಕ್ಷೆಗೆ 3,613 ಪರೀಕ್ಷಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಚಿಕ್ಕಬಳ್ಳಾಪುರದಲ್ಲಿ 738, ಬಾಗೇಪಲ್ಲಿ 520, ಗೌರಿಬಿದನೂರು 974, ಶಿಡ್ಲಘಟ್ಟ 377, ಚಿಂತಾಮಣಿ 926 ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿ 78 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ.</p>.<p>ಪರೀಕ್ಷೆಗಾಗಿ ಚಿಕ್ಕಬಳ್ಳಾಪುರದಲ್ಲಿ 2, ಬಾಗೇಪಲ್ಲಿ 1, ಚಿಂತಾಮಣಿ 2, ಶಿಡ್ಲಘಟ್ಟ 1, ಗೌರಿಬಿದನೂರು 1 ಮತ್ತು ಗುಡಿಬಂಡೆಯಲ್ಲಿ ಒಂದು ಕೇಂದ್ರ ತೆರೆಯಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕೋವಿಡ್ ಸೋಂಕಿತರಿಗಾಗಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೊಠಡಿಗಳನ್ನು ವೈರಸ್ ನಾಶಕ ದ್ರಾವಣದಿಂದ ಶುಚಿಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿ ಸೋಮವಾರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಸುಸೂತ್ರವಾಗಿ ನಡೆದವು. ಒಟ್ಟು 11 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಪರೀಕ್ಷೆಗಾಗಿ 8 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ.</p>.<p>ಸೋಮವಾರ ಬೆಳಿಗ್ಗೆ 10.15 ರಿಂದ 1.30ರ ವರೆಗೆ ಉರ್ದು ಮತ್ತು ಸಂಸ್ಕೃತ, ಮಧ್ಯಾಹ್ನ 2.15 ರಿಂದ 5.30ರ ವರೆಗೆ ಪರೀಕ್ಷೆಗಳು ನಡೆದವು. ಜಿಲ್ಲೆಯಲ್ಲಿ ಉರ್ದು ಪರೀಕ್ಷೆಗೆ 8 ಅಭ್ಯರ್ಥಿಗಳು, ಉರ್ದು ಪರೀಕ್ಷೆಗೆ ಒಬ್ಬ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಪರೀಕ್ಷೆಗೆ ಇಬ್ಬರು ಹೆಸರು ನೋಂದಾಯಿಸಿಕೊಂಡಿದ್ದರು. ಮೊದಲ ದಿನದ ಪರೀಕ್ಷೆಗೆ ಎಲ್ಲರೂ ಪರೀಕ್ಷೆಗೆ ಹಾಜರಾದರು.</p>.<p>ಜಿಲ್ಲೆಯಲ್ಲಿ ಪೂರಕ ಪರೀಕ್ಷೆಗೆ 3,613 ಪರೀಕ್ಷಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಚಿಕ್ಕಬಳ್ಳಾಪುರದಲ್ಲಿ 738, ಬಾಗೇಪಲ್ಲಿ 520, ಗೌರಿಬಿದನೂರು 974, ಶಿಡ್ಲಘಟ್ಟ 377, ಚಿಂತಾಮಣಿ 926 ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿ 78 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ.</p>.<p>ಪರೀಕ್ಷೆಗಾಗಿ ಚಿಕ್ಕಬಳ್ಳಾಪುರದಲ್ಲಿ 2, ಬಾಗೇಪಲ್ಲಿ 1, ಚಿಂತಾಮಣಿ 2, ಶಿಡ್ಲಘಟ್ಟ 1, ಗೌರಿಬಿದನೂರು 1 ಮತ್ತು ಗುಡಿಬಂಡೆಯಲ್ಲಿ ಒಂದು ಕೇಂದ್ರ ತೆರೆಯಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕೋವಿಡ್ ಸೋಂಕಿತರಿಗಾಗಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೊಠಡಿಗಳನ್ನು ವೈರಸ್ ನಾಶಕ ದ್ರಾವಣದಿಂದ ಶುಚಿಗೊಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>