ಪೇರೇಸಂದ್ರದ ಶಾಂತಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೋಡಿರಂಗಪ್ಪ ಮಾತನಾಡಿ, ‘ವಿವೇಕಾನಂದರ ವಿಚಾರ ಧಾರೆಗಳು ಉಳಿಯಬೇಕಾದರೆ ಅದು ಯುವಕರಿಂದ ಮಾತ್ರ ಸಾಧ್ಯ. ಯುವಜನತೆ ಬುದ್ಧಿವಂತಿಕೆಯ ಜತೆಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ ಮಾಡಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಟಿ ಜಯಲಕ್ಷ್ಮೀ , ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಿ.ಡಿ ಚಂದ್ರಯ್ಯ, ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗರಾಜಯ್ಯ, ಹಾಗೂ ಕಾಲೇಜಿನ ಉಪನ್ಯಾನಸಕರಾದ ರಂಗಸ್ವಾಮಿ, ವಸಂತ್ ಕುಮಾರ್, ಪ್ರೇಮ್ ಕುಮಾರ್, ಸುಜಾತ, ಪದ್ಮಕುಮಾರಿ ಉಪಸ್ಥಿತರಿದ್ದರು.