ಸ್ವಾಮಿ ವಿವೇಕಾನಂದರು ಯುವಕರಿಗೆ ಮಾನಸಿಕ, ದೈಹಿಕ, ಆಧ್ಯಾತ್ಮಿಕ, ನೈತಿಕ, ಸಾಮಾಜಿಕವಾಗಿ ಎಂದೂ ಶಕ್ತಿ ಕಳೆದುಕೊಳ್ಳಬಾರದು ಎಂದು ಕರೆ ನೀಡುತ್ತಿದ್ದರು. ಆ ಮೂಲಕ ಭಾರತೀಯ ಸಂಸ್ಕೃತಿ ಉಳಿಸಿ-ಬೆಳೆಸಲು, ನವೋತ್ಸಾಹ ಮೂಡಿಸುತ್ತಿದ್ದರು. ಜೊತೆಗೆ, ಭಾರತೀಯ ಸಂಸ್ಕೃತಿಯ ಬಗ್ಗೆ ಗೌರವ ಮೂಡಿಸಿ ಸ್ವತಂತ್ರ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು. ಈ ನಿಟ್ಟಿನಲ್ಲಿ ಅವರ ಜನ್ಮ ದಿನಾಚರಣೆಯನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.