<p><strong>ಶಿಡ್ಲಘಟ್ಟ: </strong>ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಪದವಿ ವಿದ್ಯಾರ್ಥಿಗಳ ಆನ್ಲೈನ್ ತರಗತಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರ ಉಚಿತವಾಗಿ ಟ್ಯಾಬ್ ವಿತರಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ವಿ. ಮುನಿಯಪ್ಪ ಹೇಳಿದರು.</p>.<p>ನಗರದ ಪ್ರಥಮದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ಪ್ರಥಮ ವರ್ಷದ ಪದವಿ ವಿದ್ಯಾಥಿಗಳಿಗೆ ಟ್ಯಾಬ್ ವಿತರಣೆ ಹಾಗೂ ಸ್ಮಾರ್ಟ್ ಕ್ಲಾಸ್ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಕೋವಿಡ್ ಇರುವ ಕಾರಣ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಉಚಿತ ಟ್ಯಾಬ್ ವಿತರಿಸುತ್ತಿದೆ. ವಿದ್ಯಾರ್ಥಿಗಳು ಮನೆಯಲ್ಲಿಯೇ ಇದ್ದು ಆನ್ಲೈನ್ ತರಗತಿಯ ಶಿಕ್ಷಣ ಪಡೆದುಕೊಳ್ಳುವ ಮೂಲಕ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.</p>.<p>ಪದವಿ ಪ್ರಥಮ ವರ್ಷದ 131 ಮಂದಿ ವಿದ್ಯಾರ್ಥಿಗಳ ಪೈಕಿ 10 ಮಂದಿಗೆ ಮಾತ್ರ ಸಾಂಕೇತಿಕವಾಗಿ ಟ್ಯಾಬ್ ವಿತರಿಸಲಾಗಿದ್ದು, ಉಳಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿಯೇ ಟ್ಯಾಬ್ ವಿತರಿಸಲಾಗುವುದು ಎಂದು ತಿಳಿಸಿದರು.</p>.<p>ಪ್ರಾಂಶುಪಾಲ ಡಾ.ಜಿ. ಮುರಳಿ ಆನಂದ್, ನಗರಸಭೆ ಪೌರಾಯಕ್ತ ಶ್ರೀನಿವಾಸ್, ನಗರ ಠಾಣೆ ಪಿಎಸ್ಐ ಸತೀಶ್, ಪ್ರಾಧ್ಯಾಪಕರಾದ ಡಾ.ವಿ. ವೆಂಕಟೇಶ್, ಜಿ.ಕೆ. ರಮೇಶ್, ಕೆ. ಉಮೇಶ್ರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ: </strong>ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಪದವಿ ವಿದ್ಯಾರ್ಥಿಗಳ ಆನ್ಲೈನ್ ತರಗತಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರ ಉಚಿತವಾಗಿ ಟ್ಯಾಬ್ ವಿತರಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ವಿ. ಮುನಿಯಪ್ಪ ಹೇಳಿದರು.</p>.<p>ನಗರದ ಪ್ರಥಮದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ಪ್ರಥಮ ವರ್ಷದ ಪದವಿ ವಿದ್ಯಾಥಿಗಳಿಗೆ ಟ್ಯಾಬ್ ವಿತರಣೆ ಹಾಗೂ ಸ್ಮಾರ್ಟ್ ಕ್ಲಾಸ್ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಕೋವಿಡ್ ಇರುವ ಕಾರಣ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಉಚಿತ ಟ್ಯಾಬ್ ವಿತರಿಸುತ್ತಿದೆ. ವಿದ್ಯಾರ್ಥಿಗಳು ಮನೆಯಲ್ಲಿಯೇ ಇದ್ದು ಆನ್ಲೈನ್ ತರಗತಿಯ ಶಿಕ್ಷಣ ಪಡೆದುಕೊಳ್ಳುವ ಮೂಲಕ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.</p>.<p>ಪದವಿ ಪ್ರಥಮ ವರ್ಷದ 131 ಮಂದಿ ವಿದ್ಯಾರ್ಥಿಗಳ ಪೈಕಿ 10 ಮಂದಿಗೆ ಮಾತ್ರ ಸಾಂಕೇತಿಕವಾಗಿ ಟ್ಯಾಬ್ ವಿತರಿಸಲಾಗಿದ್ದು, ಉಳಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿಯೇ ಟ್ಯಾಬ್ ವಿತರಿಸಲಾಗುವುದು ಎಂದು ತಿಳಿಸಿದರು.</p>.<p>ಪ್ರಾಂಶುಪಾಲ ಡಾ.ಜಿ. ಮುರಳಿ ಆನಂದ್, ನಗರಸಭೆ ಪೌರಾಯಕ್ತ ಶ್ರೀನಿವಾಸ್, ನಗರ ಠಾಣೆ ಪಿಎಸ್ಐ ಸತೀಶ್, ಪ್ರಾಧ್ಯಾಪಕರಾದ ಡಾ.ವಿ. ವೆಂಕಟೇಶ್, ಜಿ.ಕೆ. ರಮೇಶ್, ಕೆ. ಉಮೇಶ್ರೆಡ್ಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>