ಬಾಗೇಪಲ್ಲಿ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಜಿಲ್ಲಾಧಿಕಾರಿಗಳ ನಡೆ ಗ್ರಾಮ ಕಡೆ’ ಯೋಜನೆಯಂತೆ ಮಾ.20ರ ಶನಿವಾರದಂದು ತಾಲ್ಲೂಕಿನ ಗೊರ್ತಪಲ್ಲಿ ಗ್ರಾಮದಲ್ಲಿ ವಾಸ್ತವ್ಯದಲ್ಲಿ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
‘ತಾಲ್ಲೂಕಿನ ಗೊರ್ತಪಲ್ಲಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ 10ರಿಂದ 5ರವರೆಗೂ ವಾಸ್ತವ್ಯ ಇರಲಾಗುವುದು. ಪಂಚಾಯಿತಿ ವ್ಯಾಪ್ತಿಯಲ್ಲಿನ ಜಮೀನುಗಳ ಪಹಣಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲಾಗುವುದು. ವ್ಯಾಜ್ಯಗಳನ್ನು ಬಗೆಹರಿಸಲಾಗುವುದು. ಪಿಂಚಣಿ ಸೌಲಭ್ಯ ನೀಡುವುದು. ಸ್ಮಶಾನಕ್ಕೆ ಜಾಗ ನಿಗದಿಪಡಿಸಲಾಗುವುದು. ಆಶ್ರಯಯೋಜನೆಗಳಿಗೆ ಜಾಗ ನೀಡುವುದು. ಸರ್ಕಾರಿಜಮೀನು ಅಕ್ರಮವಾಗಿ ಒತ್ತುವರಿಯನ್ನು ತೆರವುಗೊಳಿಸಲಾಗುವುದು’ ಎಂದು ತಹಶೀಲ್ದಾರ್ ಡಿ.ಎ.ದಿವಾಕರ್ ತಿಳಿಸಿದ್ದಾರೆ.
ಸರ್ಕಾರಗಳಿಂದ ಬರುವ ಸೌಲಭ್ಯಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು. ಮತದಾರರಪಟ್ಟಿ, ಪರಿಷ್ಕರಣೆ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಕಲಿಕಾಕ್ರಮ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.