<p>ಚಿಕ್ಕಬಳ್ಳಾಪುರ: ‘ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆ ಗ್ರಾಮೀಣ ಕೃಷಿ ಕೂಲಿಕಾರ ಬದುಕಿಗೆ ಆಸರೆಯಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಗ್ರಾಮೀಣ ಪ್ರದೇಶದ ಬಡವರು, ಕೃಷಿ ಕೂಲಿಕಾರರು ಈ ಯೋಜನೆಯನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡರೆ ಕನಿಷ್ಠ ಬದುಕಿಗೆ ಪೂರಕವಾದ ಕೂಲಿ ಪಡೆಯಬಹುದು’ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಹೇಳಿದರು.</p>.<p>ತಾಲ್ಲೂಕಿನ ಅಜ್ಜವಾರ ಪಂಚಾಯಿತಿ ವ್ಯಾಪ್ತಿಯ ನಾಯನಹಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ನರೇಗಾ ಯೋಜನೆ ಉದ್ಯೋಗ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಜಿಲ್ಲೆಯಲ್ಲಿ ಇನ್ನೂ ಕೃಷಿ ಕೂಲಿಕಾರರಿಗೆ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಲು ಸಾಧ್ಯವಾಗಿಲಲ. ಆದ್ದರಿಂದ, ಹಲವು ಪ್ರಭಾವಿ ಜನರು ನರೇಗಾ ಯೋಜನೆ ಅಡಿ ಯಂತ್ರಗಳನ್ನು ಉಪಯೋಗಿಸಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಇದನ್ನು ಪ್ರತಿಯೊಬ್ಬರೂ ಖಂಡಿಸಬೇಕು’ ಎಂದು ತಿಳಿಸಿದರು.</p>.<p>‘ನರೇಗಾದಲ್ಲಿ ಭ್ರಷ್ಟಾಚಾರ ತಡೆಯಬೇಕಾದರೆ ಕೃಷಿ ಕೂಲಿಕಾರರಲ್ಲಿ ಜಾಗೃತಿ ಮೂಡಿಸಬೇಕಿದೆ. ನಮ್ಮ ಕಾನೂನನ್ನು ಸಮರ್ಪಕವಾಗಿ ಬಳಸದ ಕಾರಣ ಪ್ರಭಾವಿಗಳು ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಆದ್ದರಿಂದ ಕೃಷಿ ಕೂಲಿಕಾರರು ನರೇಗಾ ಯೋಜನೆ ಸಮರ್ಪಕ ಜಾರಿಗೆ ಮುಂದಾಗಬೇಕಿದೆ’ ಎಂದರು.</p>.<p>‘ಕೊರೊನಾ ಸಂಕಷ್ಟದಿಂದಾಗಿ ಗ್ರಾಮೀಣ ಭಾಗದ ಯುವ ಜನತೆ ಅದರಲ್ಲಿಯೂ ಪದವೀಧರರು ಉದ್ಯೋಗ ಮಾಡುತ್ತಿದ್ದವರು ಹಳ್ಳಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ಕೆಲಸ ಮಾಡಿ ಬದುಕುತ್ತಿದ್ದಾರೆ. ಆದ್ದರಿಂದ, ಸಂಕಷ್ಟ ಪರಿಹಾರ ರೂಪದಲ್ಲಿ ಕೇಂದ್ರ ಸರ್ಕಾರ ಗ್ರಾಮೀಣ ಕುಟುಂಬಗಳಿಗೆ ತಲಾ ₹7,500 ರಂತೆ ಕನಿಷ್ಠ 6 ತಿಂಗಳು ನೀಡಬೇಕು. ನರೇಗಾ ಕೂಲಿಯನ್ನು ₹600ಕ್ಕೆ ಏರಿಕೆ ಮಾಡಬೇಕು‘ ಎಂದು ಆಗ್ರಹಿಸಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಮಾತನಾಡಿ, ‘ನಾಗರಿಕರು ನರೇಗಾ ಉದ್ಯೋಗ ಚೀಟಿಗಾಗಿ ಪಂಚಾಯಿತಿಗೆ ಅರ್ಜಿ ನಮೂನೆ 1 ಸಲ್ಲಿಸಬೇಕು. ಚೀಟಿ ಪಡೆದ ಬಳಿಕ ಕೆಲಸಕ್ಕಾಗಿ ಅರ್ಜಿ ನಮೂನೆ 6ರಲ್ಲಿ ಅರ್ಜಿ ಸಲ್ಲಿಸಿದರೆ 15 ದಿನಗಳ ಒಳಗಾಗಿ ಕೆಲಸ ನೀಡಲಾಗುತ್ತದೆ’ ಎಂದು ಹೇಳಿದರು.</p>.<p>ಪಂಚಾಯಿತಿ ಕಾರ್ಯದರ್ಶಿ ವೆಂಕಟೇಶ್, ನೊಡಲ್ ಅಧಿಕಾರಿ ರಾಮದಾಸ್, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯೆ ಬಿ ಸಾವಿತ್ರಮ್ಮ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಮುನಿಕೃಷ್ಣಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ‘ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆ ಗ್ರಾಮೀಣ ಕೃಷಿ ಕೂಲಿಕಾರ ಬದುಕಿಗೆ ಆಸರೆಯಾಗಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಗ್ರಾಮೀಣ ಪ್ರದೇಶದ ಬಡವರು, ಕೃಷಿ ಕೂಲಿಕಾರರು ಈ ಯೋಜನೆಯನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡರೆ ಕನಿಷ್ಠ ಬದುಕಿಗೆ ಪೂರಕವಾದ ಕೂಲಿ ಪಡೆಯಬಹುದು’ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಹೇಳಿದರು.</p>.<p>ತಾಲ್ಲೂಕಿನ ಅಜ್ಜವಾರ ಪಂಚಾಯಿತಿ ವ್ಯಾಪ್ತಿಯ ನಾಯನಹಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ನರೇಗಾ ಯೋಜನೆ ಉದ್ಯೋಗ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಜಿಲ್ಲೆಯಲ್ಲಿ ಇನ್ನೂ ಕೃಷಿ ಕೂಲಿಕಾರರಿಗೆ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಲು ಸಾಧ್ಯವಾಗಿಲಲ. ಆದ್ದರಿಂದ, ಹಲವು ಪ್ರಭಾವಿ ಜನರು ನರೇಗಾ ಯೋಜನೆ ಅಡಿ ಯಂತ್ರಗಳನ್ನು ಉಪಯೋಗಿಸಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಇದನ್ನು ಪ್ರತಿಯೊಬ್ಬರೂ ಖಂಡಿಸಬೇಕು’ ಎಂದು ತಿಳಿಸಿದರು.</p>.<p>‘ನರೇಗಾದಲ್ಲಿ ಭ್ರಷ್ಟಾಚಾರ ತಡೆಯಬೇಕಾದರೆ ಕೃಷಿ ಕೂಲಿಕಾರರಲ್ಲಿ ಜಾಗೃತಿ ಮೂಡಿಸಬೇಕಿದೆ. ನಮ್ಮ ಕಾನೂನನ್ನು ಸಮರ್ಪಕವಾಗಿ ಬಳಸದ ಕಾರಣ ಪ್ರಭಾವಿಗಳು ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಆದ್ದರಿಂದ ಕೃಷಿ ಕೂಲಿಕಾರರು ನರೇಗಾ ಯೋಜನೆ ಸಮರ್ಪಕ ಜಾರಿಗೆ ಮುಂದಾಗಬೇಕಿದೆ’ ಎಂದರು.</p>.<p>‘ಕೊರೊನಾ ಸಂಕಷ್ಟದಿಂದಾಗಿ ಗ್ರಾಮೀಣ ಭಾಗದ ಯುವ ಜನತೆ ಅದರಲ್ಲಿಯೂ ಪದವೀಧರರು ಉದ್ಯೋಗ ಮಾಡುತ್ತಿದ್ದವರು ಹಳ್ಳಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ಕೆಲಸ ಮಾಡಿ ಬದುಕುತ್ತಿದ್ದಾರೆ. ಆದ್ದರಿಂದ, ಸಂಕಷ್ಟ ಪರಿಹಾರ ರೂಪದಲ್ಲಿ ಕೇಂದ್ರ ಸರ್ಕಾರ ಗ್ರಾಮೀಣ ಕುಟುಂಬಗಳಿಗೆ ತಲಾ ₹7,500 ರಂತೆ ಕನಿಷ್ಠ 6 ತಿಂಗಳು ನೀಡಬೇಕು. ನರೇಗಾ ಕೂಲಿಯನ್ನು ₹600ಕ್ಕೆ ಏರಿಕೆ ಮಾಡಬೇಕು‘ ಎಂದು ಆಗ್ರಹಿಸಿದರು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಮಾತನಾಡಿ, ‘ನಾಗರಿಕರು ನರೇಗಾ ಉದ್ಯೋಗ ಚೀಟಿಗಾಗಿ ಪಂಚಾಯಿತಿಗೆ ಅರ್ಜಿ ನಮೂನೆ 1 ಸಲ್ಲಿಸಬೇಕು. ಚೀಟಿ ಪಡೆದ ಬಳಿಕ ಕೆಲಸಕ್ಕಾಗಿ ಅರ್ಜಿ ನಮೂನೆ 6ರಲ್ಲಿ ಅರ್ಜಿ ಸಲ್ಲಿಸಿದರೆ 15 ದಿನಗಳ ಒಳಗಾಗಿ ಕೆಲಸ ನೀಡಲಾಗುತ್ತದೆ’ ಎಂದು ಹೇಳಿದರು.</p>.<p>ಪಂಚಾಯಿತಿ ಕಾರ್ಯದರ್ಶಿ ವೆಂಕಟೇಶ್, ನೊಡಲ್ ಅಧಿಕಾರಿ ರಾಮದಾಸ್, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ರಾಜ್ಯ ಸಮಿತಿ ಸದಸ್ಯೆ ಬಿ ಸಾವಿತ್ರಮ್ಮ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಮುನಿಕೃಷ್ಣಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>