ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆ ಪರಿಹಾರಕ್ಕೆ ‘ಜನಸ್ಪಂದನ’ದಲ್ಲಿ ಭಾಗವಹಿಸಿ

ಬಾಗೇಪಲ್ಲಿ ಪಟ್ಟಣದಲ್ಲಿ ಸೆ.25 ರಂದು ನಡೆಯುವ ಕಾರ್ಯಕ್ರಮ ಸದುಪಯೋಗಪಡಿಸಿಕೊಳ್ಳುವಂತೆ ನಾಗರಿಕರಿಗೆ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ ಮನವಿ
Last Updated 20 ಸೆಪ್ಟೆಂಬರ್ 2019, 5:46 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘‘ಪ್ರಜಾವಾಣಿ’–‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳಿಂದ ಬಾಗೇಪಲ್ಲಿ ಪಟ್ಟಣದ ಕೊಡಿಕೊಂಡ ರಸ್ತೆಯಲ್ಲಿ ದರ್ಗಾ ಸರ್ಕಲ್ ಬಳಿಯ ಹೊಸ ಶಾದಿ ಮಹಲ್‌ನಲ್ಲಿ ಸೆ.25 (ಬುಧವಾರ) ರಂದು ‘ಜನಸ್ಪಂದನ’ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ ತಿಳಿಸಿದರು.


‘ಇದೊಂದು ಪಕ್ಷಾತೀತ ಕಾರ್ಯಕ್ರಮವಾಗಿದೆ. ಕ್ಷೇತ್ರ ವ್ಯಾಪ್ತಿಯ ಬಾಗೇಪಲ್ಲಿ ಕಸಬಾ, ಗೂಳೂರು, ಮಿಟ್ಟೆಮರಿ, ಪಾತಪಾಳ್ಯ, ಚೇಳೂರು, ಗುಡಿಬಂಡೆ ಕಸಬಾ, ಸೋಮೇನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿನ ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಈ ’ಸಿಟಿಜನ್ಸ್ ಫಾರ್ ಚೇಂಜ್’ ಉತ್ತಮ ವೇದಿಕೆಯಾಗಿದೆ’ ಎಂದು ಹೇಳಿದರು.


‘ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ. ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ‘ಜನಸ್ಪಂದನ’ದಲ್ಲಿ ಭಾಗವಹಿಸಿ ಕಾರ್ಯಕ್ರಮ ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.


‘ರಾಜ್ಯ ರಸ್ತೆ ಸಾರಿಗೆ ಅವ್ಯವಸ್ಥೆ, ರಸ್ತೆ ಗುಂಡಿಗಳು, ಕುಡಿಯುವ ನೀರು, ಕಸ ವಿಲೇವಾರಿ, ಟ್ರಾಫಿಕ್ ಸಮಸ್ಯೆ, ಕೆರೆಗಳ ಅಭಿವೃದ್ಧಿ, ಬಿಡಾಡಿ ದನ, ನಾಯಿಗಳ ಕಾಟ, ಸರಗಳ್ಳತನ, ಸ್ಥಳೀಯರಿಗೆ ಟೋಲ್‌ ಸುಂಕ ವಸೂಲಿ, ಕೆರೆಗಳ ಅಭಿವೃದ್ಧಿ, ಸರ್ಕಾರಿ ಭೂಮಿ ಮತ್ತು ರಾಜಕಾಲುವೆಗಳ ಒತ್ತುವರಿ, ವಸತಿ, ನಿವೇಶನ, ಇತಿಹಾಸ ಸ್ಮಾರಕಗಳ ರಕ್ಷಣೆ ಇಂತಹ ಸಮಸ್ಯೆಗಳಿಗೆ ನೇರವಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿ, ಪರಿಹಾರ ಪಡೆಯಬಹುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT