ಶಿಡ್ಲಘಟ್ಟ: ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಶಿಡ್ಲಘಟ್ಟ ಕಚೇರಿಯಲ್ಲಿ ನಿರೀಕ್ಷಕರು ಕೆಲಸದ ಸಮಯದಲ್ಲಿ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಮತ್ತು ನ್ಯಾಯಬೆಲೆ ಅಂಗಡಿಗಳ ಕೆಲ ಮಾಲೀಕರು ಹುಟ್ಟುಹಬ್ಬವನ್ನು ಆಚರಿಸಿಕೊಂಡು ಸಂಭ್ರಮಿಸುತ್ತಿರುವ ಫೋಟೊ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಬಿ.ಎನ್.ಸ್ವಾಮಿ ಅವರು ಆಹಾರ ನಾಗರೀಕ ಪೂರೈಕೆ ಶಿರಸ್ತೇದಾರ್ ಧನಲಕ್ಷ್ಮಿ ಅವರನ್ನು ಕರೆಸಿ ತರಾಟೆಗೆ ತೆಗೆದುಕೊಂಡಿದ್ದಾರೆ.