ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಡ್ಲಘಟ್ಟ | ಕಚೇರಿಯಲ್ಲಿ ಹುಟ್ಟುಹಬ್ಬ ಆಚರಣೆ: ತಹಶೀಲ್ದಾರರಿಂದ ತರಾಟೆ

Published 1 ಜೂನ್ 2024, 15:12 IST
Last Updated 1 ಜೂನ್ 2024, 15:12 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಶಿಡ್ಲಘಟ್ಟ ಕಚೇರಿಯಲ್ಲಿ ನಿರೀಕ್ಷಕರು ಕೆಲಸದ ಸಮಯದಲ್ಲಿ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಮತ್ತು ನ್ಯಾಯಬೆಲೆ ಅಂಗಡಿಗಳ ಕೆಲ ಮಾಲೀಕರು ಹುಟ್ಟುಹಬ್ಬವನ್ನು ಆಚರಿಸಿಕೊಂಡು ಸಂಭ್ರಮಿಸುತ್ತಿರುವ ಫೋಟೊ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಚಾರ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಬಿ.ಎನ್.ಸ್ವಾಮಿ ಅವರು ಆಹಾರ ನಾಗರೀಕ ಪೂರೈಕೆ ಶಿರಸ್ತೇದಾರ್ ಧನಲಕ್ಷ್ಮಿ ಅವರನ್ನು ಕರೆಸಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಚೇರಿಯಲ್ಲಿ ಕೆಲಸದ ವೇಳೆ ಯಾರೇ ಆಗಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವಂತಿಲ್ಲ. ಕಚೇರಿಯಲ್ಲಿ ಕೆಲಸದ ವೇಳೆ ಆಗುವ ಇಂತಹ ಎಲ್ಲ ಚಟುವಟಿಕೆ, ಘಟನೆಗಳಿಗೆ ನೀವೇ ಹೊಣೆ ಆಗಲಿದ್ದು ಘಟನೆ ಕುರಿತು ಲಿಖಿತ ಸಮಜಾಯಿಷಿ ನೀಡಿ ಎಂದು ಸೂಚಿಸಿದ್ದಾರೆ.

ಶಿಡ್ಲಘಟ್ಟ ತಾಲ್ಲೂಕು ಕಚೇರಿಯಲ್ಲಿ ವಿವಿಧ ಶಾಖೆಗಳ ಸಿಬ್ಬಂದಿಯ ಹುಟ್ಟುಹಬ್ಬವನ್ನು ಕಚೇರಿ ಸಮಯದಲ್ಲಿ ಆಚರಣೆ ಮಾಡಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT