<p><strong>ಶಿಡ್ಲಘಟ್ಟ</strong>: ‘ನನ್ನ ಕೆಟ್ಟದಾಗಿ ಸ್ಪರ್ಶಿಸಿ (ಬ್ಯಾಡ್ ಟಚ್) ಅನುಚಿತವಾಗಿ ವರ್ತಿಸಿದ್ದಾರೆ’ ಎಂದು ಶಿಕ್ಷಕರೊಬ್ಬರ ವಿರುದ್ಧ ತಾಲ್ಲೂಕಿನ ಶಾಲೆಯೊಂದರ ವಿದ್ಯಾರ್ಥಿನಿ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದಾರೆ. </p>.<p>ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಶಿಕ್ಷಕರೊಬ್ಬರಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾಳೆ. </p>.<p>ಮಕ್ಕಳ ಸಹಾಯವಾಣಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಶಾಲೆಗೆ ಭೇಟಿ ನೀಡಿ ಶಾಲೆಯ ದೂರು ಪೆಟ್ಟಿಗೆ ಪರಿಶೀಲಿಸಿದ್ದಾರೆ. 9 ವಿದ್ಯಾರ್ಥಿನಿಯರು ಶಿಕ್ಷಕನ ಬ್ಯಾಡ್ ಟಚ್ ವಿರುದ್ಧ ಪತ್ರ ಬರೆದು ಹಾಕಿದ್ದಾರೆ, ಅವೆಲ್ಲವನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.</p>.<p>9 ವಿದ್ಯಾರ್ಥಿನಿಯರು ಕೂಡ ಶಿಕ್ಷಕನ ವಿರುದ್ಧ ಬ್ಯಾಡ್ ಟಚ್ ಆರೋಪ ಮಾಡಿರುವುದಾಗಿ ತಿಳಿದು ಬಂದಿದೆ. ಆದರೆ ಪೋಷಕರು ದೂರು ನೀಡಲು ಹಿಂದೇಟು ಹಾಕಿದ್ದು, ‘ಶಿಕ್ಷಕನನ್ನು ಶಾಲೆಗೆ ಕಳುಹಿಸಿದರೆ ಕೈಕಾಲು ಮುರಿದು ಹಾಕುತ್ತೇವೆ. ಮುಂದಿನ ಅನಾಹುತಗಳಿಗೆ ಅಧಿಕಾರಿಗಳೆ ಕಾರಣ’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಶಾಲೆಗೆ ಮಕ್ಕಳ ಸಹಾಯವಾಣಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ, ಸಿಬ್ಬಂದಿಯೊಂದಿಗೆ ಭೇಟಿ ನೀಡಿದ್ದೆವು. ಮಗುವೊಂದರ ಹೇಳಿಕೆಯನ್ನು ಸಹಾಯವಾಣಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಖಲಿಸಿಕೊಂಡರು. 9 ಮಕ್ಕಳ ವಿಚಾರ ನನಗೆ ಗೊತ್ತಿಲ್ಲ. ಪೋಷಕರು ದೂರು ನೀಡಲು ನಿರಾಕರಿಸಿದರು. ಮಕ್ಕಳ ಹೇಳಿಕೆ ಆಧಾರದಲ್ಲಿ ಮುಂದಿನ ಕ್ರಮವನ್ನು ಸಂಬಂಧಿಸಿದ ಇಲಾಖೆಯವರಿಂದ ಆಗಲಿದೆ ಎಂದು ಶಿಡ್ಲಘಟ್ಟ ಬಿಇಒ ನರೇಂದ್ರ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ‘ನನ್ನ ಕೆಟ್ಟದಾಗಿ ಸ್ಪರ್ಶಿಸಿ (ಬ್ಯಾಡ್ ಟಚ್) ಅನುಚಿತವಾಗಿ ವರ್ತಿಸಿದ್ದಾರೆ’ ಎಂದು ಶಿಕ್ಷಕರೊಬ್ಬರ ವಿರುದ್ಧ ತಾಲ್ಲೂಕಿನ ಶಾಲೆಯೊಂದರ ವಿದ್ಯಾರ್ಥಿನಿ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದಾರೆ. </p>.<p>ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಶಿಕ್ಷಕರೊಬ್ಬರಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾಳೆ. </p>.<p>ಮಕ್ಕಳ ಸಹಾಯವಾಣಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಶಾಲೆಗೆ ಭೇಟಿ ನೀಡಿ ಶಾಲೆಯ ದೂರು ಪೆಟ್ಟಿಗೆ ಪರಿಶೀಲಿಸಿದ್ದಾರೆ. 9 ವಿದ್ಯಾರ್ಥಿನಿಯರು ಶಿಕ್ಷಕನ ಬ್ಯಾಡ್ ಟಚ್ ವಿರುದ್ಧ ಪತ್ರ ಬರೆದು ಹಾಕಿದ್ದಾರೆ, ಅವೆಲ್ಲವನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.</p>.<p>9 ವಿದ್ಯಾರ್ಥಿನಿಯರು ಕೂಡ ಶಿಕ್ಷಕನ ವಿರುದ್ಧ ಬ್ಯಾಡ್ ಟಚ್ ಆರೋಪ ಮಾಡಿರುವುದಾಗಿ ತಿಳಿದು ಬಂದಿದೆ. ಆದರೆ ಪೋಷಕರು ದೂರು ನೀಡಲು ಹಿಂದೇಟು ಹಾಕಿದ್ದು, ‘ಶಿಕ್ಷಕನನ್ನು ಶಾಲೆಗೆ ಕಳುಹಿಸಿದರೆ ಕೈಕಾಲು ಮುರಿದು ಹಾಕುತ್ತೇವೆ. ಮುಂದಿನ ಅನಾಹುತಗಳಿಗೆ ಅಧಿಕಾರಿಗಳೆ ಕಾರಣ’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಶಾಲೆಗೆ ಮಕ್ಕಳ ಸಹಾಯವಾಣಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ, ಸಿಬ್ಬಂದಿಯೊಂದಿಗೆ ಭೇಟಿ ನೀಡಿದ್ದೆವು. ಮಗುವೊಂದರ ಹೇಳಿಕೆಯನ್ನು ಸಹಾಯವಾಣಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಖಲಿಸಿಕೊಂಡರು. 9 ಮಕ್ಕಳ ವಿಚಾರ ನನಗೆ ಗೊತ್ತಿಲ್ಲ. ಪೋಷಕರು ದೂರು ನೀಡಲು ನಿರಾಕರಿಸಿದರು. ಮಕ್ಕಳ ಹೇಳಿಕೆ ಆಧಾರದಲ್ಲಿ ಮುಂದಿನ ಕ್ರಮವನ್ನು ಸಂಬಂಧಿಸಿದ ಇಲಾಖೆಯವರಿಂದ ಆಗಲಿದೆ ಎಂದು ಶಿಡ್ಲಘಟ್ಟ ಬಿಇಒ ನರೇಂದ್ರ ಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>