<p><strong>ಶಿಡ್ಲಘಟ್ಟ</strong>: ‘ನನ್ನ ಕೆಟ್ಟದಾಗಿ ಸ್ಪರ್ಶಿಸಿ (ಬ್ಯಾಡ್ ಟಚ್) ಅನುಚಿತವಾಗಿ ವರ್ತಿಸಿದ್ದಾರೆ’ ಎಂದು ಶಿಕ್ಷಕರೊಬ್ಬರ ವಿರುದ್ಧ ತಾಲ್ಲೂಕಿನ ಶಾಲೆಯೊಂದರ ವಿದ್ಯಾರ್ಥಿನಿ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದಾರೆ. </p>.<p>ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಶಿಕ್ಷಕರೊಬ್ಬರಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾಳೆ. </p>.<p>ಮಕ್ಕಳ ಸಹಾಯವಾಣಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಶಾಲೆಗೆ ಭೇಟಿ ನೀಡಿ ಶಾಲೆಯ ದೂರು ಪೆಟ್ಟಿಗೆ ಪರಿಶೀಲಿಸಿದ್ದಾರೆ. 9 ವಿದ್ಯಾರ್ಥಿನಿಯರು ಶಿಕ್ಷಕನ ಬ್ಯಾಡ್ ಟಚ್ ವಿರುದ್ಧ ಪತ್ರ ಬರೆದು ಹಾಕಿದ್ದಾರೆ, ಅವೆಲ್ಲವನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.</p>.<p>9 ವಿದ್ಯಾರ್ಥಿನಿಯರು ಕೂಡ ಶಿಕ್ಷಕನ ವಿರುದ್ಧ ಬ್ಯಾಡ್ ಟಚ್ ಆರೋಪ ಮಾಡಿರುವುದಾಗಿ ತಿಳಿದು ಬಂದಿದೆ. ಆದರೆ ಪೋಷಕರು ದೂರು ನೀಡಲು ಹಿಂದೇಟು ಹಾಕಿದ್ದು, ‘ಶಿಕ್ಷಕನನ್ನು ಶಾಲೆಗೆ ಕಳುಹಿಸಿದರೆ ಕೈಕಾಲು ಮುರಿದು ಹಾಕುತ್ತೇವೆ. ಮುಂದಿನ ಅನಾಹುತಗಳಿಗೆ ಅಧಿಕಾರಿಗಳೆ ಕಾರಣ’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಶಾಲೆಗೆ ಮಕ್ಕಳ ಸಹಾಯವಾಣಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ, ಸಿಬ್ಬಂದಿಯೊಂದಿಗೆ ಭೇಟಿ ನೀಡಿದ್ದೆವು. ಮಗುವೊಂದರ ಹೇಳಿಕೆಯನ್ನು ಸಹಾಯವಾಣಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಖಲಿಸಿಕೊಂಡರು. 9 ಮಕ್ಕಳ ವಿಚಾರ ನನಗೆ ಗೊತ್ತಿಲ್ಲ. ಪೋಷಕರು ದೂರು ನೀಡಲು ನಿರಾಕರಿಸಿದರು. ಮಕ್ಕಳ ಹೇಳಿಕೆ ಆಧಾರದಲ್ಲಿ ಮುಂದಿನ ಕ್ರಮವನ್ನು ಸಂಬಂಧಿಸಿದ ಇಲಾಖೆಯವರಿಂದ ಆಗಲಿದೆ ಎಂದು ಶಿಡ್ಲಘಟ್ಟ ಬಿಇಒ ನರೇಂದ್ರ ಕುಮಾರ್ ಹೇಳಿದರು.</p>
<p><strong>ಶಿಡ್ಲಘಟ್ಟ</strong>: ‘ನನ್ನ ಕೆಟ್ಟದಾಗಿ ಸ್ಪರ್ಶಿಸಿ (ಬ್ಯಾಡ್ ಟಚ್) ಅನುಚಿತವಾಗಿ ವರ್ತಿಸಿದ್ದಾರೆ’ ಎಂದು ಶಿಕ್ಷಕರೊಬ್ಬರ ವಿರುದ್ಧ ತಾಲ್ಲೂಕಿನ ಶಾಲೆಯೊಂದರ ವಿದ್ಯಾರ್ಥಿನಿ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದಾರೆ. </p>.<p>ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಶಿಕ್ಷಕರೊಬ್ಬರಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾಳೆ. </p>.<p>ಮಕ್ಕಳ ಸಹಾಯವಾಣಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಶಾಲೆಗೆ ಭೇಟಿ ನೀಡಿ ಶಾಲೆಯ ದೂರು ಪೆಟ್ಟಿಗೆ ಪರಿಶೀಲಿಸಿದ್ದಾರೆ. 9 ವಿದ್ಯಾರ್ಥಿನಿಯರು ಶಿಕ್ಷಕನ ಬ್ಯಾಡ್ ಟಚ್ ವಿರುದ್ಧ ಪತ್ರ ಬರೆದು ಹಾಕಿದ್ದಾರೆ, ಅವೆಲ್ಲವನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.</p>.<p>9 ವಿದ್ಯಾರ್ಥಿನಿಯರು ಕೂಡ ಶಿಕ್ಷಕನ ವಿರುದ್ಧ ಬ್ಯಾಡ್ ಟಚ್ ಆರೋಪ ಮಾಡಿರುವುದಾಗಿ ತಿಳಿದು ಬಂದಿದೆ. ಆದರೆ ಪೋಷಕರು ದೂರು ನೀಡಲು ಹಿಂದೇಟು ಹಾಕಿದ್ದು, ‘ಶಿಕ್ಷಕನನ್ನು ಶಾಲೆಗೆ ಕಳುಹಿಸಿದರೆ ಕೈಕಾಲು ಮುರಿದು ಹಾಕುತ್ತೇವೆ. ಮುಂದಿನ ಅನಾಹುತಗಳಿಗೆ ಅಧಿಕಾರಿಗಳೆ ಕಾರಣ’ ಎಂದು ಎಚ್ಚರಿಕೆ ನೀಡಿದ್ದಾರೆ.</p>.<p>ಶಾಲೆಗೆ ಮಕ್ಕಳ ಸಹಾಯವಾಣಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ, ಸಿಬ್ಬಂದಿಯೊಂದಿಗೆ ಭೇಟಿ ನೀಡಿದ್ದೆವು. ಮಗುವೊಂದರ ಹೇಳಿಕೆಯನ್ನು ಸಹಾಯವಾಣಿ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ದಾಖಲಿಸಿಕೊಂಡರು. 9 ಮಕ್ಕಳ ವಿಚಾರ ನನಗೆ ಗೊತ್ತಿಲ್ಲ. ಪೋಷಕರು ದೂರು ನೀಡಲು ನಿರಾಕರಿಸಿದರು. ಮಕ್ಕಳ ಹೇಳಿಕೆ ಆಧಾರದಲ್ಲಿ ಮುಂದಿನ ಕ್ರಮವನ್ನು ಸಂಬಂಧಿಸಿದ ಇಲಾಖೆಯವರಿಂದ ಆಗಲಿದೆ ಎಂದು ಶಿಡ್ಲಘಟ್ಟ ಬಿಇಒ ನರೇಂದ್ರ ಕುಮಾರ್ ಹೇಳಿದರು.</p>