<p><strong>ಚಿಕ್ಕಬಳ್ಳಾಪುರ:</strong> ಗೌರಿಬಿದನೂರು ತಾಲ್ಲೂಕಿನ ಜಿ.ಬೊಮ್ಮಸಂದ್ರ ಗ್ರಾಮದ ನಿವಾಸಿ, ಶಿಕ್ಷಕ ಶ್ರೀನಾಥರೆಡ್ಡಿ (34) ಅವರು ತಾಲ್ಲೂಕಿನ ನಂದಿ ಹೋಬಳಿಯ ಜಕ್ಕಲಮಡಗು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬುಧವಾರ ಬೆಳಿಗ್ಗೆ ಜಲಾಶಯದಲ್ಲಿ ಶವ ಪತ್ತೆಯಾಗಿದೆ.</p>.<p>ಬಾದಿಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರಾಗಿದ್ದ ಶ್ರೀನಾಥರೆಡ್ಡಿ ಅವರು ಸೋಮವಾರ ಶಾಲೆಗೆ ಹಾಜರಾಗಿರಲಿಲ್ಲ. ಸಂಜೆಗೆ ಮನೆಗೂ ಹಿಂತಿರುಗಿರಲಿಲ್ಲ.</p>.<p>ಶ್ರೀನಾಥರೆಡ್ಡಿ ಅವರ ಪತ್ತೆಗಾಗಿ ಕುಟುಂಬದವರು ಹುಡುಕಾಟ ನಡೆಸಿದಾಗ ಅವರ ಬೈಕ್, ಮೊಬೈಲ್ ಜಕ್ಕಲಮಡಗು ಜಲಾಶಯದ ದಂಡೆಯ ಮೇಲೆ ಪತ್ತೆಯಾಗಿದ್ದವು.</p>.<p>ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿ ಸಹಾಯದಿಂದ ಮಂಗಳವಾರ ಕೆರೆಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು.<br />ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶ್ರೀನಾಥರೆಡ್ಡಿ ಅವರು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅವರು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬದವರು ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಗೌರಿಬಿದನೂರು ತಾಲ್ಲೂಕಿನ ಜಿ.ಬೊಮ್ಮಸಂದ್ರ ಗ್ರಾಮದ ನಿವಾಸಿ, ಶಿಕ್ಷಕ ಶ್ರೀನಾಥರೆಡ್ಡಿ (34) ಅವರು ತಾಲ್ಲೂಕಿನ ನಂದಿ ಹೋಬಳಿಯ ಜಕ್ಕಲಮಡಗು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಬುಧವಾರ ಬೆಳಿಗ್ಗೆ ಜಲಾಶಯದಲ್ಲಿ ಶವ ಪತ್ತೆಯಾಗಿದೆ.</p>.<p>ಬಾದಿಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರಾಗಿದ್ದ ಶ್ರೀನಾಥರೆಡ್ಡಿ ಅವರು ಸೋಮವಾರ ಶಾಲೆಗೆ ಹಾಜರಾಗಿರಲಿಲ್ಲ. ಸಂಜೆಗೆ ಮನೆಗೂ ಹಿಂತಿರುಗಿರಲಿಲ್ಲ.</p>.<p>ಶ್ರೀನಾಥರೆಡ್ಡಿ ಅವರ ಪತ್ತೆಗಾಗಿ ಕುಟುಂಬದವರು ಹುಡುಕಾಟ ನಡೆಸಿದಾಗ ಅವರ ಬೈಕ್, ಮೊಬೈಲ್ ಜಕ್ಕಲಮಡಗು ಜಲಾಶಯದ ದಂಡೆಯ ಮೇಲೆ ಪತ್ತೆಯಾಗಿದ್ದವು.</p>.<p>ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿ ಸಹಾಯದಿಂದ ಮಂಗಳವಾರ ಕೆರೆಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು.<br />ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶ್ರೀನಾಥರೆಡ್ಡಿ ಅವರು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅವರು ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬದವರು ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>