<p><strong>ಚಿಂತಾಮಣಿ: </strong>‘ಮಕ್ಕಳಿಗೆ ಜ್ಞಾನಾರ್ಜನೆ ನೀಡುವ ಮೂಲಕ ವಿವಿಧ ಕ್ಷೇತ್ರದಲ್ಲಿ ಜ್ಞಾನಿಗಳನ್ನು ತಯಾರು ಮಾಡುವ ಶಿಕ್ಷಕರು ದೇಶವನ್ನು ಕಟ್ಟುವ ಶಿಲ್ಪಿಗಳು’ ಎಂದು ತಹಶೀಲ್ದಾರ್ ಡಿ. ಹನುಮಂತರಾಯಪ್ಪ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆಯಿಂದ ನಗರದ ತಾಲ್ಲೂಕು ಪಂಚಾಯಿತಿ ಸಭಾಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಸಮಾಜದಲ್ಲಿ ಗುರುಗಳಿಗೆ ಉನ್ನತ ಸ್ಥಾನಮಾನವಿದೆ. ಅವರ ಮಾರ್ಗದರ್ಶನದಲ್ಲಿ ಅನೇಕ ಮಂದಿ ಜೀವನ ರೂಪಿಸಿಕೊಂಡು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿ ಗುರುವಿನ ಸ್ಥಾನವನ್ನು ಮತ್ತಷ್ಟು ಎತ್ತರಕ್ಕೇರಿಸುತ್ತಾರೆ. ಮಕ್ಕಳಿಗೆ ಜ್ಞಾನ, ಸದ್ಗುಣ ಕಲಿಸುವಂತಹ ಪವಿತ್ರ ವೃತ್ತಿ ಶಿಕ್ಷಕರದ್ದು ಎಂದು ನುಡಿದರು.</p>.<p>ತತ್ವಜ್ಞಾನಿ, ಚಿಂತಕ, ಶಿಕ್ಷಣ ತಜ್ಞ ಹಾಗೂ ಮಾಜಿ ರಾಷ್ಟ್ರಪತಿ ಡಾ.ಎಸ್. ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಅವರ ಆದರ್ಶ, ತತ್ವ, ಚಿಂತನೆಗಳನ್ನು ಶಿಕ್ಷಕರು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಪ್ರಥಮ ಸ್ಥಾನ ಗಳಿಸಿತ್ತು. ಈ ವರ್ಷವೂ 30 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ವೈದ್ಯರು, ವಿಜ್ಞಾನಿಗಳು, ಎಂಜಿನಿಯರ್, ಕಲಾವಿದರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳನ್ನು ಶಿಕ್ಷಕರನ್ನು ರೂಪಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯವ ಹರಿಕಾರರು ಎಂದು ಕರೆಯಬಹುದು ಎಂದರು.</p>.<p>ನಗರಸಭೆ ಅಧ್ಯಕ್ಷೆ ರೇಖಾ ಉಮೇಶ್ ಮಾತನಾಡಿ, ಪ್ರತಿವರ್ಷ ಹಬ್ಬದ ಸಂಭ್ರಮದಲ್ಲಿ ಶಿಕ್ಷಕರ ದಿನ ಆಚರಿಸಲಾಗುತ್ತಿತ್ತು. ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಶಿಕ್ಷಕರ ದಿನಾಚರಣೆಯನ್ನು ಬೆರಳೆಣಿಕೆಯಷ್ಟು ಮಂದಿಯನ್ನು ಸೇರಿಸಿಕೊಂಡು ಸರಳವಾಗಿ ಆಚರಿಸಲಾಗುತ್ತಿದೆ. ಮಕ್ಕಳ ಜತೆಗೆ ಹೆಚ್ಚಿನ ಒಡನಾಟ ಶಿಕ್ಷರೊಡನೆ ಇರುವುದರಿಂದ, ಶಿಕ್ಷಕರನ್ನು ಅನುಕರಣೆ ಮಾಡುತ್ತಾರೆ. ಹಾಗಾಗಿ, ಶಿಕ್ಷಕರು ಆದರ್ಶ ವ್ಯಕ್ತಿಗಳಾಗಬೇಕು ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಜಿ. ಸುರೇಶ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥ್ ಮಾತನಾಡಿದರು. ಕೃಷಿಕ ಸಮಾಜದ ಅಧ್ಯಕ್ಷ ಎಂ. ಗೋವಿಂದಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಜನಾರ್ದನ ರೆಡ್ಡಿ, ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>‘ಮಕ್ಕಳಿಗೆ ಜ್ಞಾನಾರ್ಜನೆ ನೀಡುವ ಮೂಲಕ ವಿವಿಧ ಕ್ಷೇತ್ರದಲ್ಲಿ ಜ್ಞಾನಿಗಳನ್ನು ತಯಾರು ಮಾಡುವ ಶಿಕ್ಷಕರು ದೇಶವನ್ನು ಕಟ್ಟುವ ಶಿಲ್ಪಿಗಳು’ ಎಂದು ತಹಶೀಲ್ದಾರ್ ಡಿ. ಹನುಮಂತರಾಯಪ್ಪ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆಯಿಂದ ನಗರದ ತಾಲ್ಲೂಕು ಪಂಚಾಯಿತಿ ಸಭಾಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಸಮಾಜದಲ್ಲಿ ಗುರುಗಳಿಗೆ ಉನ್ನತ ಸ್ಥಾನಮಾನವಿದೆ. ಅವರ ಮಾರ್ಗದರ್ಶನದಲ್ಲಿ ಅನೇಕ ಮಂದಿ ಜೀವನ ರೂಪಿಸಿಕೊಂಡು ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಿ ಗುರುವಿನ ಸ್ಥಾನವನ್ನು ಮತ್ತಷ್ಟು ಎತ್ತರಕ್ಕೇರಿಸುತ್ತಾರೆ. ಮಕ್ಕಳಿಗೆ ಜ್ಞಾನ, ಸದ್ಗುಣ ಕಲಿಸುವಂತಹ ಪವಿತ್ರ ವೃತ್ತಿ ಶಿಕ್ಷಕರದ್ದು ಎಂದು ನುಡಿದರು.</p>.<p>ತತ್ವಜ್ಞಾನಿ, ಚಿಂತಕ, ಶಿಕ್ಷಣ ತಜ್ಞ ಹಾಗೂ ಮಾಜಿ ರಾಷ್ಟ್ರಪತಿ ಡಾ.ಎಸ್. ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಅವರ ಆದರ್ಶ, ತತ್ವ, ಚಿಂತನೆಗಳನ್ನು ಶಿಕ್ಷಕರು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕಳೆದ ವರ್ಷದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಪ್ರಥಮ ಸ್ಥಾನ ಗಳಿಸಿತ್ತು. ಈ ವರ್ಷವೂ 30 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ವೈದ್ಯರು, ವಿಜ್ಞಾನಿಗಳು, ಎಂಜಿನಿಯರ್, ಕಲಾವಿದರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳನ್ನು ಶಿಕ್ಷಕರನ್ನು ರೂಪಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅವರನ್ನು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯವ ಹರಿಕಾರರು ಎಂದು ಕರೆಯಬಹುದು ಎಂದರು.</p>.<p>ನಗರಸಭೆ ಅಧ್ಯಕ್ಷೆ ರೇಖಾ ಉಮೇಶ್ ಮಾತನಾಡಿ, ಪ್ರತಿವರ್ಷ ಹಬ್ಬದ ಸಂಭ್ರಮದಲ್ಲಿ ಶಿಕ್ಷಕರ ದಿನ ಆಚರಿಸಲಾಗುತ್ತಿತ್ತು. ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಶಿಕ್ಷಕರ ದಿನಾಚರಣೆಯನ್ನು ಬೆರಳೆಣಿಕೆಯಷ್ಟು ಮಂದಿಯನ್ನು ಸೇರಿಸಿಕೊಂಡು ಸರಳವಾಗಿ ಆಚರಿಸಲಾಗುತ್ತಿದೆ. ಮಕ್ಕಳ ಜತೆಗೆ ಹೆಚ್ಚಿನ ಒಡನಾಟ ಶಿಕ್ಷರೊಡನೆ ಇರುವುದರಿಂದ, ಶಿಕ್ಷಕರನ್ನು ಅನುಕರಣೆ ಮಾಡುತ್ತಾರೆ. ಹಾಗಾಗಿ, ಶಿಕ್ಷಕರು ಆದರ್ಶ ವ್ಯಕ್ತಿಗಳಾಗಬೇಕು ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಜಿ. ಸುರೇಶ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥ್ ಮಾತನಾಡಿದರು. ಕೃಷಿಕ ಸಮಾಜದ ಅಧ್ಯಕ್ಷ ಎಂ. ಗೋವಿಂದಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಜನಾರ್ದನ ರೆಡ್ಡಿ, ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>