<p><strong>ಶಿಡ್ಲಘಟ್ಟ:</strong> ಬೋಧನೆಯಲ್ಲಿನ ಕ್ರಿಯಾಶೀಲತೆ ಹೆಚ್ಚಿಸಿ ಸೃಜನಶೀಲತೆ ವಿಸ್ತರಿಸಲು ಹೆಚ್ಚೆಚ್ಚು ಸಹಪಠ್ಯಚಟುವಟಿಕೆಗಳಲ್ಲಿ ಶಿಕ್ಷಕರು ಪಾಲ್ಗೊಳ್ಳಬೇಕು ಎಂದು ತಾಲ್ಲೂಕು ಅಕ್ಷರದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ತಿಳಿಸಿದರು.</p>.<p>ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕಲ್ಯಾಣ ನಿಧಿಯಿಂದ ಶಾಲಾ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಶಿಕ್ಷಕರ ಸಹಪಠ್ಯಚಟುವಟಿಕೆ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.</p>.<p>ಶಿಕ್ಷಕರು ವಿವಿಧ ಸಾಂಸ್ಕೃತಿಕ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಒತ್ತಡ ನಿವಾರಣೆಯಾಗಿ ಜ್ಞಾನವು ವಿಸ್ತಾರಗೊಳ್ಳುವುದು. ಹೊಸ ಕೌಶಲ ಗಳಿಕೆ, ಬೋಧನೆಯಲ್ಲಿ ಪರಿಣಾಮಕಾರಿತ್ವವನ್ನು ಗಳಿಸಿಕೊಳ್ಳಬಹುದಾಗಿದೆ. ಆ ಮೂಲಕ ವಿದ್ಯಾರ್ಥಿಗಳಿಗೆ ಅನುಕರಣೆ ಮಾಡಲು ಮಾದರಿಯಾಗಬಹುದಾಗಿದೆ. ಜೀವನ ಮತ್ತು ವೃತ್ತಿಯಲ್ಲಿನ ಉತ್ಸಾಹ ವೃದ್ಧಿಯು ಅಗತ್ಯವಿದೆ ಎಂದರು.</p>.<p>ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಕೆ.ಎಚ್.ಪ್ರಸನ್ನಕುಮಾರ್ ಮಾತನಾಡಿ, ಇತರೆ ಶಿಕ್ಷಕರೊಂದಿಗೆ ಬೆರೆತು ಅನುಭವ ಹಂಚಿಕೊಳ್ಳಲು, ವೃತ್ತಿಜೀವನ ಮತ್ತು ವೈಯಕ್ತಿಕ ಬೆಳವಣಿಗೆಗೆ ಸಹಪಠ್ಯಚಟುವಟಿಕೆ ಸಹಕಾರಿಯಾಗಿವೆ. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು, ಬೋಧನೆಯಲ್ಲಿ ರಚನಾತ್ಮಕವಾದ ವಿವಿಧತೆಯನ್ನು ಕಾಯ್ದುಕೊಳ್ಳಲು ಅನುಕೂಲವಾಗುತ್ತದೆ ಎಂದರು.</p>.<p>ಶಿಕ್ಷಕರಿಗಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಭಕ್ತಿಗೀತೆಗಾಯನ, ಸಾಮಾನ್ಯ ಜ್ಞಾನ ಮತ್ತು ವಿಜ್ಞಾನ ರಸಪ್ರಶ್ನೆ, ಸ್ಥಳದಲ್ಲಿಯೇ ಚಿತ್ರಕಲೆ ಮತ್ತು ಪಾಠೋಪಕರಣಗಳ ತಯಾರಿಕೆ, ಪ್ರಬಂಧ, ಆಶುಭಾಷಣ ಸ್ಪರ್ಧೆ ನಡೆದವು. ವಿಜೇತರಿಗೆ ನಗದು ಬಹುಮಾನ ವಿತರಿಸಲಾಯಿತು.</p>.<p>ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ, ಶಿಕ್ಷಣ ಸಂಯೋಜಕ ಯು.ವೈ.ಮಂಜುನಾಥ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರಸ್ವತಮ್ಮ, ಸರ್ಕಾರಿ ನೌಕರರ ಸಂಘದ ಕೆಂಪೇಗೌಡ ಮಾತನಾಡಿದರು.</p>.<p>ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಖಜಾಂಚಿ ಆರ್.ಹೇಮಾವತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸುಂದರಾಚಾರಿ, ಶಿಕ್ಷಣ ಸಂಯೋಜಕ ಅಂಕಿರೆಡ್ಡಿ, ವೆಂಕಟರೆಡ್ಡಿ, ಮುಖ್ಯಶಿಕ್ಷಕಿ ಸಯೀದಾ ಇಷ್ರತ್, ನಿವೃತ್ತ ಮುಖ್ಯಶಿಕ್ಷಕ ಬೈರಾರೆಡ್ಡಿ, ಬಿಆರ್ಪಿ ಮಂಜುನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಬೋಧನೆಯಲ್ಲಿನ ಕ್ರಿಯಾಶೀಲತೆ ಹೆಚ್ಚಿಸಿ ಸೃಜನಶೀಲತೆ ವಿಸ್ತರಿಸಲು ಹೆಚ್ಚೆಚ್ಚು ಸಹಪಠ್ಯಚಟುವಟಿಕೆಗಳಲ್ಲಿ ಶಿಕ್ಷಕರು ಪಾಲ್ಗೊಳ್ಳಬೇಕು ಎಂದು ತಾಲ್ಲೂಕು ಅಕ್ಷರದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ತಿಳಿಸಿದರು.</p>.<p>ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ಕಲ್ಯಾಣ ನಿಧಿಯಿಂದ ಶಾಲಾ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಶಿಕ್ಷಕರ ಸಹಪಠ್ಯಚಟುವಟಿಕೆ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.</p>.<p>ಶಿಕ್ಷಕರು ವಿವಿಧ ಸಾಂಸ್ಕೃತಿಕ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಒತ್ತಡ ನಿವಾರಣೆಯಾಗಿ ಜ್ಞಾನವು ವಿಸ್ತಾರಗೊಳ್ಳುವುದು. ಹೊಸ ಕೌಶಲ ಗಳಿಕೆ, ಬೋಧನೆಯಲ್ಲಿ ಪರಿಣಾಮಕಾರಿತ್ವವನ್ನು ಗಳಿಸಿಕೊಳ್ಳಬಹುದಾಗಿದೆ. ಆ ಮೂಲಕ ವಿದ್ಯಾರ್ಥಿಗಳಿಗೆ ಅನುಕರಣೆ ಮಾಡಲು ಮಾದರಿಯಾಗಬಹುದಾಗಿದೆ. ಜೀವನ ಮತ್ತು ವೃತ್ತಿಯಲ್ಲಿನ ಉತ್ಸಾಹ ವೃದ್ಧಿಯು ಅಗತ್ಯವಿದೆ ಎಂದರು.</p>.<p>ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಕೆ.ಎಚ್.ಪ್ರಸನ್ನಕುಮಾರ್ ಮಾತನಾಡಿ, ಇತರೆ ಶಿಕ್ಷಕರೊಂದಿಗೆ ಬೆರೆತು ಅನುಭವ ಹಂಚಿಕೊಳ್ಳಲು, ವೃತ್ತಿಜೀವನ ಮತ್ತು ವೈಯಕ್ತಿಕ ಬೆಳವಣಿಗೆಗೆ ಸಹಪಠ್ಯಚಟುವಟಿಕೆ ಸಹಕಾರಿಯಾಗಿವೆ. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು, ಬೋಧನೆಯಲ್ಲಿ ರಚನಾತ್ಮಕವಾದ ವಿವಿಧತೆಯನ್ನು ಕಾಯ್ದುಕೊಳ್ಳಲು ಅನುಕೂಲವಾಗುತ್ತದೆ ಎಂದರು.</p>.<p>ಶಿಕ್ಷಕರಿಗಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಭಕ್ತಿಗೀತೆಗಾಯನ, ಸಾಮಾನ್ಯ ಜ್ಞಾನ ಮತ್ತು ವಿಜ್ಞಾನ ರಸಪ್ರಶ್ನೆ, ಸ್ಥಳದಲ್ಲಿಯೇ ಚಿತ್ರಕಲೆ ಮತ್ತು ಪಾಠೋಪಕರಣಗಳ ತಯಾರಿಕೆ, ಪ್ರಬಂಧ, ಆಶುಭಾಷಣ ಸ್ಪರ್ಧೆ ನಡೆದವು. ವಿಜೇತರಿಗೆ ನಗದು ಬಹುಮಾನ ವಿತರಿಸಲಾಯಿತು.</p>.<p>ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ, ಶಿಕ್ಷಣ ಸಂಯೋಜಕ ಯು.ವೈ.ಮಂಜುನಾಥ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರಸ್ವತಮ್ಮ, ಸರ್ಕಾರಿ ನೌಕರರ ಸಂಘದ ಕೆಂಪೇಗೌಡ ಮಾತನಾಡಿದರು.</p>.<p>ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಖಜಾಂಚಿ ಆರ್.ಹೇಮಾವತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸುಂದರಾಚಾರಿ, ಶಿಕ್ಷಣ ಸಂಯೋಜಕ ಅಂಕಿರೆಡ್ಡಿ, ವೆಂಕಟರೆಡ್ಡಿ, ಮುಖ್ಯಶಿಕ್ಷಕಿ ಸಯೀದಾ ಇಷ್ರತ್, ನಿವೃತ್ತ ಮುಖ್ಯಶಿಕ್ಷಕ ಬೈರಾರೆಡ್ಡಿ, ಬಿಆರ್ಪಿ ಮಂಜುನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>