<p><strong>ಚಿಂತಾಮಣಿ:</strong> ಗರ್ಭಿಣಿ, ಅಂಗವಿಕಲ ಹಾಗೂ ತೀವ್ರತರ ಕಾಯಿಲೆ ಇರುವ ಶಿಕ್ಷಕರಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ಮಂಗಳವಾರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರಗೆ ಮನವಿ ಸಲ್ಲಿಸಲಾಯಿತು.</p>.<p>ಸಮೀಕ್ಷೆ ಅವಧಿಯಲ್ಲಿ ದಸರಾ ಹಾಗೂ ನವರಾತ್ರಿ ಹಬ್ಬಗಳಿವೆ. ಶಿಕ್ಷಕರು ಹಬ್ಬಗಳಲ್ಲಿ ಪಾಲ್ಗೊಳ್ಳಲು ಸಮೀಕ್ಷೆಯನ್ನು ಒಂದು ವಾರ ಮುಂದೂಡಬೇಕು. ವರ್ಷಪೂರ್ತಿ ದುಡಿಯುವ ಶಿಕ್ಷಕರು ಕುಟುಂಬದ ಜತೆ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದೆ.</p>.<p>ಗರ್ಭಿಣಿ, ಬಾಣಂತಿ ಶಿಕ್ಷಕಿಯರು, ಅಂಗವಿಕಲ ಶಿಕ್ಷಕ, ಶಿಕ್ಷಕಿಯರು, ಕಾಯಿಲೆಯಿಂದ ಬಳಲುತ್ತಿರುವ ಶಿಕ್ಷಕ ಶಿಕ್ಷಕಿಯರು ಹಾಗೂ ವಯೋನಿವೃತ್ತಿ ಅಂಚಿನಲ್ಲಿರುವವರು ಮನೆ–ಮನೆಗೂ ತಿರುಗಿ ಸಮೀಕ್ಷೆಯಲ್ಲಿ ಕೆಲಸ ಮಾಡುವುದು ಕಷ್ಟವಾಗುತ್ತದೆ. ಹಾಗಾಗಿ ಅಂತಹ ಶಿಕ್ಷಕರಿಗೆ ಸಮೀಕ್ಷೆಯಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ರಜಾ ಅವಧಿ ಮತ್ತು ಹೆಚ್ಚುವರಿಯಾಗಿ ಗಣತಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ ಗೌರವಧನ ಹಾಗೂ ಗಳಿಕೆ ರಜೆಯನ್ನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.</p>.<p>ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮನವಿ ಸ್ವೀಕರಿಸಿದರು. ಕಾನೂನಿನಂತೆ ಹಾಗೂ ಸಾಧ್ಯವಾದಷ್ಟು ಶಿಕ್ಷಕರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಆರ್. ಅಶೋಕ್ ಕುಮಾರ್, ಪಿ.ಪಿಳ್ಳನ್ನ, ಪದಾಧಿಕಾರಿಗಳು ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ಗರ್ಭಿಣಿ, ಅಂಗವಿಕಲ ಹಾಗೂ ತೀವ್ರತರ ಕಾಯಿಲೆ ಇರುವ ಶಿಕ್ಷಕರಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ಮಂಗಳವಾರ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರಗೆ ಮನವಿ ಸಲ್ಲಿಸಲಾಯಿತು.</p>.<p>ಸಮೀಕ್ಷೆ ಅವಧಿಯಲ್ಲಿ ದಸರಾ ಹಾಗೂ ನವರಾತ್ರಿ ಹಬ್ಬಗಳಿವೆ. ಶಿಕ್ಷಕರು ಹಬ್ಬಗಳಲ್ಲಿ ಪಾಲ್ಗೊಳ್ಳಲು ಸಮೀಕ್ಷೆಯನ್ನು ಒಂದು ವಾರ ಮುಂದೂಡಬೇಕು. ವರ್ಷಪೂರ್ತಿ ದುಡಿಯುವ ಶಿಕ್ಷಕರು ಕುಟುಂಬದ ಜತೆ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದೆ.</p>.<p>ಗರ್ಭಿಣಿ, ಬಾಣಂತಿ ಶಿಕ್ಷಕಿಯರು, ಅಂಗವಿಕಲ ಶಿಕ್ಷಕ, ಶಿಕ್ಷಕಿಯರು, ಕಾಯಿಲೆಯಿಂದ ಬಳಲುತ್ತಿರುವ ಶಿಕ್ಷಕ ಶಿಕ್ಷಕಿಯರು ಹಾಗೂ ವಯೋನಿವೃತ್ತಿ ಅಂಚಿನಲ್ಲಿರುವವರು ಮನೆ–ಮನೆಗೂ ತಿರುಗಿ ಸಮೀಕ್ಷೆಯಲ್ಲಿ ಕೆಲಸ ಮಾಡುವುದು ಕಷ್ಟವಾಗುತ್ತದೆ. ಹಾಗಾಗಿ ಅಂತಹ ಶಿಕ್ಷಕರಿಗೆ ಸಮೀಕ್ಷೆಯಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ರಜಾ ಅವಧಿ ಮತ್ತು ಹೆಚ್ಚುವರಿಯಾಗಿ ಗಣತಿ ಕಾರ್ಯನಿರ್ವಹಿಸುವ ಶಿಕ್ಷಕರಿಗೆ ಗೌರವಧನ ಹಾಗೂ ಗಳಿಕೆ ರಜೆಯನ್ನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.</p>.<p>ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮನವಿ ಸ್ವೀಕರಿಸಿದರು. ಕಾನೂನಿನಂತೆ ಹಾಗೂ ಸಾಧ್ಯವಾದಷ್ಟು ಶಿಕ್ಷಕರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಆರ್. ಅಶೋಕ್ ಕುಮಾರ್, ಪಿ.ಪಿಳ್ಳನ್ನ, ಪದಾಧಿಕಾರಿಗಳು ನಿಯೋಗದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>