ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಉಪ್ಪರಪೇಟೆ ಗ್ರಾಮದಲ್ಲಿನ ಸೃಷ್ಟೀಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆದವು. ಕೈವಾರದ ಭೀಮಲಿಂಗೇಶ್ವರ ದೇವಾಲಯದಲ್ಲಿ, ಮಹಾಕೈಲಾಸಗಿರಿ ಗುಹಾಂತರ ದೇವಾಲಯ, ಮುರುಗಮಲೆಯ ಮುಕ್ತೀಶ್ವರದೇವಾಲಯ, ಆಲಂಬಗಿರಿ ಸೇರಿದಂತೆ ಎಲ್ಲ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಕಾರ್ತಿಕ ಸೋಮವಾರದಂದು ಎಲ್ಲ ದೇವಾಲಯಗಳಿಗೂ ಜನಸಾಗರವೇ ಹರಿದುಬಂದಿತ್ತು.