‘ತರಗತಿಗಳಿಗೆ ಹಾಜರಾಗುವ ಹಾಗೂ ಆನ್ಲೈನ್ ಮೂಲಕ ಕಲಿಯುವ ಆಯ್ಕೆಯನ್ನು ವಿದ್ಯಾರ್ಥಿಗಳಿಗೆ ಬಿಡಲಾಗಿದೆ. ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಂತೋಷದಿಂದ ಕಾಲೇಜಿಗೆ ಆಗಮಿಸಿ, ಪಾಠ ಕೇಳುತ್ತಿದ್ದಾರೆ. ಕೊರೊನಾ ನಿಯಮ ಪಾಲಿಸುವಂತೆ ಜಾಗೃತಿ ಮೂಡಿಸಲಾಗಿದೆ’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ವೈ.ನಾರಾಯಣ ತಿಳಿಸಿದರು.