<p><strong>ಚಿಕ್ಕಬಳ್ಳಾಪುರ:</strong> ಶ್ರಾವಣ ಮಾಸ ಮಂಗಳವಾರ (ಜುಲೈ 21) ಆರಂಭವಾಗಲಿದೆ. ಶಿವ, ಗಣಪತಿ, ವೆಂಕಟೇಶ್ವರ, ನರಸಿಂಹಸ್ವಾಮಿ, ಆಂಜನೇಯ ಸೇರಿ ವಿವಿಧ ದೇಗುಲಗಳಲ್ಲಿ ನಿತ್ಯ ಪೂಜೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಕೋವಿಡ್-19 ಮಾರ್ಗಸೂಚಿಯಂತೆ ದೇಗುಲಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.</p>.<p>ಶ್ರಾವಣದ ಮೊದಲ ದಿನ ಮಂಗಳವಾರ ಬಂದಿರುವ ಕಾರಣ ನವದುರ್ಗೆಯರ ದೇಗುಲಗಳನ್ನು ಸ್ವಚ್ಛಗೊಳಿಸುವ ಕಾರ್ಯಭರದಿಂದ ಸಾಗಿದೆ. ಈ ಮಾಸದಲ್ಲಿ ಸಾಮಾನ್ಯವಾಗಿ ದೇಗುಲಕ್ಕೆ ಹೋಗುವ ಭಕ್ತರ ಸಂಖ್ಯೆ ಹೆಚ್ಚು. ಆದರೆ, ಕೊರೊನಾ ಸೋಂಕು ವ್ಯಾಪಿಸುತ್ತಿರುವುದರಿಂದ ಗುಂಪು ಗುಂಪಾಗಿ ದೇಗುಲ ಪ್ರವೇಶಿಸಲು ಅವಕಾಶ ನೀಡದಿರಲು ಹಾಗೂ ತೀರ್ಥ, ಪ್ರಸಾದ ವಿತರಿಸದಿರಲು ಆಡಳಿತ ಮಂಡಳಿ, ಸೇವಾ ಟ್ರಸ್ಟ್ಗಳು ತೀರ್ಮಾನಿಸಿವೆ.</p>.<p>ಶಿವನ ಆರಾಧಕರಿಗೆ ಸೋಮವಾರ ಶ್ರೇಷ್ಠ ದಿನವಾದ್ದರಿಂದ ಶ್ರಾವಣ ಮಾಸದ ಎಲ್ಲ ಸೋಮವಾರ ಶಿವನ ಮೂರ್ತಿಗೆ ಜಲಾಭಿಷೇಕ, ಮಹಾರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಬಿಲ್ವಾ ಪತ್ರೆ ಅರ್ಚನೆ ಜತೆಗೆ ವಿವಿಧ ಪುಷ್ಪಗಳಿಂದ ಅಲಂಕರಿಸಲಾಗುತ್ತದೆ.</p>.<p>ಶ್ರಾವಣ ಮಾಸದ ಪ್ರತಿ ಶನಿವಾರ ಜಿಲ್ಲೆಯಾದ್ಯಂತ ಲಕ್ಷ್ಮೀ ವೆಂಕಟರಮಣ ಸ್ವಾಮಿ, ನರಸಿಂಹಸ್ವಾಮಿ ದೇವಾಲಯಗಳಲ್ಲಿ ಸಡಗರ, ಸಂಭ್ರಮ ಮನೆ ಮಾಡಲಿದೆ.</p>.<p>ಬಾಗೇಪಲ್ಲಿ ಗಡಿದಂ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯ, ತಲಕಾಯಲ ಬೆಟ್ಟ ವೆಂಕಟರಮಣಸ್ವಾಮಿ, ಆವಲಬೆಟ್ಟದ ಧೇನುಗಿರಿ ಲಕ್ಷ್ಮಿ ನರಸಿಂಹ ದೇವಾಲಯ, ಶ್ರೀನಿವಾಸ ಸಾಗರ ಕೆರೆ ವೆಂಕಟರಮಣಸ್ವಾಮಿ ದೇವಾಲಯ, ನಂದಿ ಬಳಿಯ ನರಸಿಂಹಸ್ವಾಮಿ ಬೆಟ್ಟದಲ್ಲಿರುವ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಸಿದ್ಧತೆ ಜೋರಾಗಿದೆ.</p>.<p>ಚಿಕ್ಕಬಳ್ಳಾಪುರದ ಕಂದವಾರ ಬಾಗಿಲು ಬಳಿ ಇರುವ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ದೇವಾಲಯ, ದಿನ್ನೆಹೊಸಹಳ್ಳಿ ರಸ್ತೆಯಲ್ಲಿರುವ ಜಾಲಾರಿ ನರಸಿಂಹಸ್ವಾಮಿ, ಚಿಕ್ಕದಾಸರಹಳ್ಳಿ ಗುಡ್ಡದ ಮೇಲಿನ ಶ್ರೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ಈಗಾಗಲೇ ಶ್ರಾವಣದ ಸಡಗರ ಮನೆ ಮಾಡಿದೆ.</p>.<p>ಪ್ರತಿ ವರ್ಷದಂತೆ ದೇವಾಲಯದಲ್ಲಿ ವಿಶೇಷ ಅಭಿಷೇಕ, ಅಲಂಕಾರ, ಪೂಜೆ, ಮಹಾಮಂಗಳಾರತಿ, ಹವನದಂತಹ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ. ಉಳಿದಂತೆ ಸರ್ಕಾರದ ಮಾರ್ಗಸೂಚಿ ಅನುಸಾರ ಭಕ್ತರಿಗೆ ದರ್ಶನದ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎನ್ನುತ್ತಾರೆ ಅರ್ಚಕರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಶ್ರಾವಣ ಮಾಸ ಮಂಗಳವಾರ (ಜುಲೈ 21) ಆರಂಭವಾಗಲಿದೆ. ಶಿವ, ಗಣಪತಿ, ವೆಂಕಟೇಶ್ವರ, ನರಸಿಂಹಸ್ವಾಮಿ, ಆಂಜನೇಯ ಸೇರಿ ವಿವಿಧ ದೇಗುಲಗಳಲ್ಲಿ ನಿತ್ಯ ಪೂಜೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಕೋವಿಡ್-19 ಮಾರ್ಗಸೂಚಿಯಂತೆ ದೇಗುಲಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.</p>.<p>ಶ್ರಾವಣದ ಮೊದಲ ದಿನ ಮಂಗಳವಾರ ಬಂದಿರುವ ಕಾರಣ ನವದುರ್ಗೆಯರ ದೇಗುಲಗಳನ್ನು ಸ್ವಚ್ಛಗೊಳಿಸುವ ಕಾರ್ಯಭರದಿಂದ ಸಾಗಿದೆ. ಈ ಮಾಸದಲ್ಲಿ ಸಾಮಾನ್ಯವಾಗಿ ದೇಗುಲಕ್ಕೆ ಹೋಗುವ ಭಕ್ತರ ಸಂಖ್ಯೆ ಹೆಚ್ಚು. ಆದರೆ, ಕೊರೊನಾ ಸೋಂಕು ವ್ಯಾಪಿಸುತ್ತಿರುವುದರಿಂದ ಗುಂಪು ಗುಂಪಾಗಿ ದೇಗುಲ ಪ್ರವೇಶಿಸಲು ಅವಕಾಶ ನೀಡದಿರಲು ಹಾಗೂ ತೀರ್ಥ, ಪ್ರಸಾದ ವಿತರಿಸದಿರಲು ಆಡಳಿತ ಮಂಡಳಿ, ಸೇವಾ ಟ್ರಸ್ಟ್ಗಳು ತೀರ್ಮಾನಿಸಿವೆ.</p>.<p>ಶಿವನ ಆರಾಧಕರಿಗೆ ಸೋಮವಾರ ಶ್ರೇಷ್ಠ ದಿನವಾದ್ದರಿಂದ ಶ್ರಾವಣ ಮಾಸದ ಎಲ್ಲ ಸೋಮವಾರ ಶಿವನ ಮೂರ್ತಿಗೆ ಜಲಾಭಿಷೇಕ, ಮಹಾರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಬಿಲ್ವಾ ಪತ್ರೆ ಅರ್ಚನೆ ಜತೆಗೆ ವಿವಿಧ ಪುಷ್ಪಗಳಿಂದ ಅಲಂಕರಿಸಲಾಗುತ್ತದೆ.</p>.<p>ಶ್ರಾವಣ ಮಾಸದ ಪ್ರತಿ ಶನಿವಾರ ಜಿಲ್ಲೆಯಾದ್ಯಂತ ಲಕ್ಷ್ಮೀ ವೆಂಕಟರಮಣ ಸ್ವಾಮಿ, ನರಸಿಂಹಸ್ವಾಮಿ ದೇವಾಲಯಗಳಲ್ಲಿ ಸಡಗರ, ಸಂಭ್ರಮ ಮನೆ ಮಾಡಲಿದೆ.</p>.<p>ಬಾಗೇಪಲ್ಲಿ ಗಡಿದಂ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯ, ತಲಕಾಯಲ ಬೆಟ್ಟ ವೆಂಕಟರಮಣಸ್ವಾಮಿ, ಆವಲಬೆಟ್ಟದ ಧೇನುಗಿರಿ ಲಕ್ಷ್ಮಿ ನರಸಿಂಹ ದೇವಾಲಯ, ಶ್ರೀನಿವಾಸ ಸಾಗರ ಕೆರೆ ವೆಂಕಟರಮಣಸ್ವಾಮಿ ದೇವಾಲಯ, ನಂದಿ ಬಳಿಯ ನರಸಿಂಹಸ್ವಾಮಿ ಬೆಟ್ಟದಲ್ಲಿರುವ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರಾವಣ ಮಾಸದ ಸಿದ್ಧತೆ ಜೋರಾಗಿದೆ.</p>.<p>ಚಿಕ್ಕಬಳ್ಳಾಪುರದ ಕಂದವಾರ ಬಾಗಿಲು ಬಳಿ ಇರುವ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ದೇವಾಲಯ, ದಿನ್ನೆಹೊಸಹಳ್ಳಿ ರಸ್ತೆಯಲ್ಲಿರುವ ಜಾಲಾರಿ ನರಸಿಂಹಸ್ವಾಮಿ, ಚಿಕ್ಕದಾಸರಹಳ್ಳಿ ಗುಡ್ಡದ ಮೇಲಿನ ಶ್ರೀವೆಂಕಟರಮಣಸ್ವಾಮಿ ದೇವಾಲಯದಲ್ಲಿ ಈಗಾಗಲೇ ಶ್ರಾವಣದ ಸಡಗರ ಮನೆ ಮಾಡಿದೆ.</p>.<p>ಪ್ರತಿ ವರ್ಷದಂತೆ ದೇವಾಲಯದಲ್ಲಿ ವಿಶೇಷ ಅಭಿಷೇಕ, ಅಲಂಕಾರ, ಪೂಜೆ, ಮಹಾಮಂಗಳಾರತಿ, ಹವನದಂತಹ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ. ಉಳಿದಂತೆ ಸರ್ಕಾರದ ಮಾರ್ಗಸೂಚಿ ಅನುಸಾರ ಭಕ್ತರಿಗೆ ದರ್ಶನದ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎನ್ನುತ್ತಾರೆ ಅರ್ಚಕರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>