<p><strong>ಚಿಕ್ಕಬಳ್ಳಾಪುರ</strong>: ನಗರದ ಶಿಡ್ಲಘಟ್ಟ ವೃತ್ತದಲ್ಲಿ ಕರ್ನಾಟಕದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯಿಂದ ಭೀಮಾಕೋರೆಗಾಂವ್ ವಿಜಯೋತ್ಸವ ಆಚರಿಸಲಾಯಿತು. ಅಂಬೇಡ್ಕರ್ ಭವನದಿಂದ ತಮಟೆ ವಾದ್ಯಗಳೊಂದಿಗೆ ಮೆರವಣಿಗೆ ಹೊರಟ ಕಾರ್ಯಕರ್ತರು ಶಿಡ್ಲಘಟ್ಟ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ಕ್ರಾಂತಿಗೀತೆಗಳನ್ನು ಹಾಡಿದರು.</p>.<p>ಸಂಘಟನೆ ರಾಜ್ಯ ಸಂಚಾಲಕ ಸುಧಾ ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಪರಿಶಿಷ್ಟ ಸಮುದಾಯದಲ್ಲಿ ಸ್ವಾಭಿಮಾನದ ಕಿಡಿ ಹೊತ್ತಿಸಿದರು. ಇತಿಹಾಸ ಅವಲೋಕಿಸಿದರೆ ಹೆಣ್ಣು, ಹೊನ್ನು ಮಣ್ಣಿಗಾಗಿ ನಡೆದ ಯುದ್ಧಗಳೇ ಹೆಚ್ಚು ಎಂದು ಹೇಳಿದರು.</p>.<p>ಸ್ವಾಭಿಮಾನಕ್ಕಾಗಿ ನಡೆದ ಯುದ್ಧದಲ್ಲಿ 500 ಮಹಾರ್ ಸೈನಿಕರು ಅನ್ನ, ನೀರು ಇಲ್ಲದೆ ಸುಮಾರು ಎರಡು ದಿನಗಳ ಕಾಲ ನಡೆದು 30 ಸಾವಿರ ಪೇಶ್ವೆ ಸೈನಿಕರ ವಿರುದ್ಧ ಯುದ್ಧದಲ್ಲಿ ಗೆಲುವು ಸಾಧಿಸಿದ್ದಾರೆ. ಇವರ ಈ ಕೆಚ್ಚೆದೆಯ ಹೋರಾಟವನ್ನು ಬ್ರಿಟಿಷ್ ಕಮಾಂಡರ್ ಎಫ್.ಎಫ್.ಸ್ಟಾಂಟನ್ ಪುಸ್ತಕದಲ್ಲಿ ದಾಖಲಿಸಿದ್ದಾರೆ ಎಂದು ಹೇಳಿದರು.</p>.<p>ಲೇಖಕ ಸರ್ದಾರ್ ಚಾಂದ್ ಪಾಷಾ ಮಾತನಾಡಿ, ಶಿವಾಜಿ ಮಹಾರಾಜರ ಆಡಳಿತದಲ್ಲಿ ಶೇ 25ರಷ್ಟು ಮಹರ್ ಸೈನಿಕರು ಸೇನೆಯಲ್ಲಿ ಇದ್ದರು.ಪೇಶ್ವೆಗಳ ಎರಡನೇ ಬಾಜಿರಾಯ ಮಹರ್ ಸೈನಿಕರನ್ನು ಸೈನ್ಯದಿಂದ ಹೊರಗಟ್ಟಿದರು ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಕೋಡಿ ರಂಗಪ್ಪ ಭೀಮಾ ಕೋರೆಗಾಂವ್ ಹೋರಾಟ ಇತಿಹಾಸವನ್ನು ಸ್ಮರಿಸಿದರು.</p>.<p>ಗಾ.ನ ಅಶ್ವತ್ಥ್ ಕ್ರಾಂತಿಗೀತೆಗಳನ್ನು ಹಾಡಿದರು. ಪ್ರೊ.ಶಂಕರ್, ಶಿಕ್ಷಕ ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಾಗೇಶ್, ಜಿಲ್ಲಾ ಸಂಘಟನೆ ಸಂಚಾಲಕ ಶ್ರೀನಿವಾಸಯ್ಯ, ತಾಲ್ಲೂಕು ಸಂಚಾಲಕ ವೆಂಕಟೇಶ್, ಆರ್.ಎಸ್.ಮುನಿಕೃಷ್ಣ, ವಿ.ಪಿ.ಸತೀಶ್, ಸತ್ಯಪ್ಪ, ಡೇವಿಡ್, ಕಂದವಾರ ಮಹೇಶ್, ಮುನಿಸ್ವಾಮಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ನಗರದ ಶಿಡ್ಲಘಟ್ಟ ವೃತ್ತದಲ್ಲಿ ಕರ್ನಾಟಕದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯಿಂದ ಭೀಮಾಕೋರೆಗಾಂವ್ ವಿಜಯೋತ್ಸವ ಆಚರಿಸಲಾಯಿತು. ಅಂಬೇಡ್ಕರ್ ಭವನದಿಂದ ತಮಟೆ ವಾದ್ಯಗಳೊಂದಿಗೆ ಮೆರವಣಿಗೆ ಹೊರಟ ಕಾರ್ಯಕರ್ತರು ಶಿಡ್ಲಘಟ್ಟ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ಕ್ರಾಂತಿಗೀತೆಗಳನ್ನು ಹಾಡಿದರು.</p>.<p>ಸಂಘಟನೆ ರಾಜ್ಯ ಸಂಚಾಲಕ ಸುಧಾ ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಪರಿಶಿಷ್ಟ ಸಮುದಾಯದಲ್ಲಿ ಸ್ವಾಭಿಮಾನದ ಕಿಡಿ ಹೊತ್ತಿಸಿದರು. ಇತಿಹಾಸ ಅವಲೋಕಿಸಿದರೆ ಹೆಣ್ಣು, ಹೊನ್ನು ಮಣ್ಣಿಗಾಗಿ ನಡೆದ ಯುದ್ಧಗಳೇ ಹೆಚ್ಚು ಎಂದು ಹೇಳಿದರು.</p>.<p>ಸ್ವಾಭಿಮಾನಕ್ಕಾಗಿ ನಡೆದ ಯುದ್ಧದಲ್ಲಿ 500 ಮಹಾರ್ ಸೈನಿಕರು ಅನ್ನ, ನೀರು ಇಲ್ಲದೆ ಸುಮಾರು ಎರಡು ದಿನಗಳ ಕಾಲ ನಡೆದು 30 ಸಾವಿರ ಪೇಶ್ವೆ ಸೈನಿಕರ ವಿರುದ್ಧ ಯುದ್ಧದಲ್ಲಿ ಗೆಲುವು ಸಾಧಿಸಿದ್ದಾರೆ. ಇವರ ಈ ಕೆಚ್ಚೆದೆಯ ಹೋರಾಟವನ್ನು ಬ್ರಿಟಿಷ್ ಕಮಾಂಡರ್ ಎಫ್.ಎಫ್.ಸ್ಟಾಂಟನ್ ಪುಸ್ತಕದಲ್ಲಿ ದಾಖಲಿಸಿದ್ದಾರೆ ಎಂದು ಹೇಳಿದರು.</p>.<p>ಲೇಖಕ ಸರ್ದಾರ್ ಚಾಂದ್ ಪಾಷಾ ಮಾತನಾಡಿ, ಶಿವಾಜಿ ಮಹಾರಾಜರ ಆಡಳಿತದಲ್ಲಿ ಶೇ 25ರಷ್ಟು ಮಹರ್ ಸೈನಿಕರು ಸೇನೆಯಲ್ಲಿ ಇದ್ದರು.ಪೇಶ್ವೆಗಳ ಎರಡನೇ ಬಾಜಿರಾಯ ಮಹರ್ ಸೈನಿಕರನ್ನು ಸೈನ್ಯದಿಂದ ಹೊರಗಟ್ಟಿದರು ಎಂದು ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಕೋಡಿ ರಂಗಪ್ಪ ಭೀಮಾ ಕೋರೆಗಾಂವ್ ಹೋರಾಟ ಇತಿಹಾಸವನ್ನು ಸ್ಮರಿಸಿದರು.</p>.<p>ಗಾ.ನ ಅಶ್ವತ್ಥ್ ಕ್ರಾಂತಿಗೀತೆಗಳನ್ನು ಹಾಡಿದರು. ಪ್ರೊ.ಶಂಕರ್, ಶಿಕ್ಷಕ ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಾಗೇಶ್, ಜಿಲ್ಲಾ ಸಂಘಟನೆ ಸಂಚಾಲಕ ಶ್ರೀನಿವಾಸಯ್ಯ, ತಾಲ್ಲೂಕು ಸಂಚಾಲಕ ವೆಂಕಟೇಶ್, ಆರ್.ಎಸ್.ಮುನಿಕೃಷ್ಣ, ವಿ.ಪಿ.ಸತೀಶ್, ಸತ್ಯಪ್ಪ, ಡೇವಿಡ್, ಕಂದವಾರ ಮಹೇಶ್, ಮುನಿಸ್ವಾಮಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>