ಸುಮಾರು ₹1.20 ಕೋಟಿ ವೆಚ್ಚದಲ್ಲಿ ಸೋಮೇಶ್ವರ ಕೆರೆಗೆ ಎಚ್.ಎನ್.ವ್ಯಾಲಿ ನೀರು ಹರಿಸಲು ಯೋಜನೆ ರೂಪಿಸಲಾಗಿತ್ತು. ಅದರಂತೆ ಕಾಲುವೆ ಕಾಮಗಾರಿ ಪೂರ್ಣಗೊಂಡಿದೆ. ನಾನು ಈ ಕಾಲುವೆ ಕಾಮಗಾರಿ ನಡೆಯುವುದಕ್ಕೂ ಮುನ್ನವೇ ಅಧಿಕಾರಿಗಳಿಗೆ ಕಾಮಗಾರಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಿದ್ದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಕಾಲುವೆ ಕಾಮಗಾರಿ ಕಳಪೆಯಾಗಿದೆ. ಕೂಡಲೇ ಕಾಲುವೆ ಕಾಮಗಾರಿಯನ್ನು ಸರಿಪಡಿಸಿ, ನೀರು ಸರಾಗವಾಗಿ ಹರಿಯಲು ಕ್ರಮ ತೆಗೆದುಕೊಳ್ಳಬೇಕು ಎಂದರು.