ಚಿಂತಾಮಣಿ: ತಾಲ್ಲೂಕಿನ ಚಿನ್ನಸಂದ್ರದ ಸಮೀಪ ಶನಿವಾರ ರಾತ್ರಿ ಸಿಮೆಂಟ್ ಸಾಗಾಣಿಕೆಯ ಲಾರಿಯು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ವಾಸುದೇವಪುರ ನಾರಾಯಣ (34), ನಾಗರಾಜ (35) ಮೃತರು. ಈ ಇಬ್ಬರು ದ್ವಿಚಕ್ರವಾಹನದಲ್ಲಿ ಆಂಧ್ರಪ್ರದೇಶದ ಬಾಯಿಕೊಅಂಡಕ್ಕೆ ಹೋಗುತ್ತಿದ್ದರು. ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.