<p>ಬಾಗೇಪಲ್ಲಿ: ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಎಲ್ಲ ಧರ್ಮ, ಜಾತಿ, ವರ್ಗದ ಮಹನೀಯರು ಭಾಗವಹಿಸಿ ತ್ಯಾಗ ಬಲಿದಾನ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದಿದ್ದಾರೆ ಎಂದು ತಹಶೀಲ್ದಾರ್ ಡಿ.ಎ.ದಿವಾಕರ್ ಹೇಳಿದರು.</p>.<p>ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾವರಣದಲ್ಲಿ ಭಾನುವಾರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.</p>.<p>ಸ್ವಾತಂತ್ರ್ಯ ಚಳವಳಿ ಒಬ್ಬ ವ್ಯಕ್ತಿಯಿಂದ ನಡೆದ ಹೋರಾಟವಲ್ಲ. ರಾಜಕೀಯ ಹೋರಾಟವಾಗಿರದೇ, ಸಾಮಾಜಿಕ, ಆರ್ಥಿಕವಾದ ಹೋರಾಟ ಆಗಿದೆ. ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಏಕಧ್ವನಿಯಾಗಿ ಹೋರಾಟ ನಡೆದಿದೆ ಎಂದರು.</p>.<p>ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಚಿನ್ನಕೈವಾರಮಯ್ಯ, ದೇಶಕ್ಕೆ ಸ್ವಾತಂತ್ರ್ಯ ಕಳೆದು 75 ವರ್ಷ ಕಂಡರೂ ದೇಶದಲ್ಲಿ ಇಂದಿಗೂ ಅಸಮಾನತೆ, ಬಡತನ, ನಿರುದ್ಯೋಗ, ಶೋಷಣೆ ಜೀವಂತ ಇದೆ. ಶಿಕ್ಷಣ, ಆರೋಗ್ಯ ಸಮರ್ಪಕವಾಗಿ ಸಿಗದೇ ವಂಚಿತರಾಗಿದ್ದಾರೆ<br />ಎಂದರು.</p>.<p>ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದಲ್ಲಿ ಕರಾಟೆಯಲ್ಲಿ ಭಾಗವಹಿಸಿದ ಕರಾಟೆಪಟುಗಳಿಗೆ ಗಣ್ಯರು ಪ್ರಶಸ್ತಿ ಪತ್ರ ವಿತರಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ, ಸರ್ಕಲ್ ಇನ್ಸ್ಪೆಕ್ಟರ್ ಡಿ.ಆರ್.ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿದ್ದಪ್ಪ, ಪುರಸಭೆ ಮುಖ್ಯಾಧಿಕಾರಿ ಕೆ.ಮಧುಕರ್, ತಾಲ್ಲೂಕು ದೈಹಿಕ ಪರಿವೀಕ್ಷಕ ಜಯರಾಂ, ರಾಮಲಿಂಗಾರೆಡ್ಡಿ, ಮಂಜುನಾಥ್, ಆರ್.ಹನುಮಂತರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗೇಪಲ್ಲಿ: ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಎಲ್ಲ ಧರ್ಮ, ಜಾತಿ, ವರ್ಗದ ಮಹನೀಯರು ಭಾಗವಹಿಸಿ ತ್ಯಾಗ ಬಲಿದಾನ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದಿದ್ದಾರೆ ಎಂದು ತಹಶೀಲ್ದಾರ್ ಡಿ.ಎ.ದಿವಾಕರ್ ಹೇಳಿದರು.</p>.<p>ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾವರಣದಲ್ಲಿ ಭಾನುವಾರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.</p>.<p>ಸ್ವಾತಂತ್ರ್ಯ ಚಳವಳಿ ಒಬ್ಬ ವ್ಯಕ್ತಿಯಿಂದ ನಡೆದ ಹೋರಾಟವಲ್ಲ. ರಾಜಕೀಯ ಹೋರಾಟವಾಗಿರದೇ, ಸಾಮಾಜಿಕ, ಆರ್ಥಿಕವಾದ ಹೋರಾಟ ಆಗಿದೆ. ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಏಕಧ್ವನಿಯಾಗಿ ಹೋರಾಟ ನಡೆದಿದೆ ಎಂದರು.</p>.<p>ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಚಿನ್ನಕೈವಾರಮಯ್ಯ, ದೇಶಕ್ಕೆ ಸ್ವಾತಂತ್ರ್ಯ ಕಳೆದು 75 ವರ್ಷ ಕಂಡರೂ ದೇಶದಲ್ಲಿ ಇಂದಿಗೂ ಅಸಮಾನತೆ, ಬಡತನ, ನಿರುದ್ಯೋಗ, ಶೋಷಣೆ ಜೀವಂತ ಇದೆ. ಶಿಕ್ಷಣ, ಆರೋಗ್ಯ ಸಮರ್ಪಕವಾಗಿ ಸಿಗದೇ ವಂಚಿತರಾಗಿದ್ದಾರೆ<br />ಎಂದರು.</p>.<p>ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದಲ್ಲಿ ಕರಾಟೆಯಲ್ಲಿ ಭಾಗವಹಿಸಿದ ಕರಾಟೆಪಟುಗಳಿಗೆ ಗಣ್ಯರು ಪ್ರಶಸ್ತಿ ಪತ್ರ ವಿತರಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ, ಸರ್ಕಲ್ ಇನ್ಸ್ಪೆಕ್ಟರ್ ಡಿ.ಆರ್.ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿದ್ದಪ್ಪ, ಪುರಸಭೆ ಮುಖ್ಯಾಧಿಕಾರಿ ಕೆ.ಮಧುಕರ್, ತಾಲ್ಲೂಕು ದೈಹಿಕ ಪರಿವೀಕ್ಷಕ ಜಯರಾಂ, ರಾಮಲಿಂಗಾರೆಡ್ಡಿ, ಮಂಜುನಾಥ್, ಆರ್.ಹನುಮಂತರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>