<p>ಚಿಕ್ಕಬಳ್ಳಾಪುರ: ಜಿಲ್ಲೆಯ ಕನಸಿನ ಯೋಜನೆಯಾದ ವೈದ್ಯಕೀಯ ಶಿಕ್ಷಣ ಕಾಲೇಜಿನ ಕಾಮಗಾರಿ ಭರದಿಂದ ನಡೆಯುತ್ತಿದೆ. ಭೌತಿಕವಾಗಿ ಶೇ 45ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಉದ್ಘಾಟನೆಯಾಗಲಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ಅವರು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಲೇಜಿನ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.</p>.<p>ಸಚಿವ ಡಾ.ಕೆ.ಸುಧಾಕರ್ ಅವರ ನಿರ್ದೇಶನದಂತೆ ಕಾಮಗಾರಿ ಸಾಗುತ್ತಿದೆ. ಇಲ್ಲಿಯವರೆಗೆ ₹ 200 ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದೆ. ₹ 134 ಕೋಟಿ ಈಗಾಗಲೇ ಬಿಡುಗಡೆ ಆಗಿದೆ. ಉಳಿಕೆ ಹಣ ಬಿಡುಗಡೆ ಪ್ರಕ್ರಿಯೆಯಲ್ಲಿದೆ ಎಂದರು.</p>.<p>ಕಾಮಗಾರಿ ಪ್ರಕ್ರಿಯೆಗೆ ಇನ್ನಷ್ಟು ವೇಗ ನೀಡಿ ನಿಗದಿತ ಅವಧಿಗಿಂತ ಮುಂಚೆಯೇ ಪೂರ್ಣಗೊಳಿಸಬೇಕು. ಯಾವುದೇ ರೀತಿಯ ಸಮಸ್ಯೆಗಳು ಕಂಡುಬಂದರೆ ಕೂಡಲೇ ತಿಳಿಸಬೇಕು ಎಂದು ಕಾಲೇಜು ನಿರ್ಮಾಣ ಯೋಜನೆಯ ವ್ಯವಸ್ಥಾಪಕರಿಗೆ ಸೂಚಿಸಿದರು.</p>.<p>ಕಾಲೇಜಿನ ಆವರಣದ ಅಂಚಿನ ಅಕ್ಕಪಕ್ಕದ ಖಾಲಿ ಜಾಗ ಗುರುತಿಸಿ 1000ಕ್ಕೂ ಹೆಚ್ಚು ಗಿಡಗಳನ್ನು ಒಂದೆರಡು ದಿನಗಳಲ್ಲಿ ನೆಡಬೇಕು. ಉದ್ಘಾಟನೆ ವೇಳೆಗೆ ಸುಂದರ ಹಸಿರು ವನ ಬೆಳೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸಾಮಾಜಿಕ ಅರಣ್ಯ ಅಧಿಕಾರಿಗೆ ನಿರ್ದೇಶನ ನೀಡಿದರು.</p>.<p>ವೈದ್ಯಕೀಯ ಶಿಕ್ಷಣ ಕಾಲೇಜು ಕಾರ್ಯಾರಂಭವಾದ ಮೇಲೆ ನೀರಿನ ಸಮಸ್ಯೆ ತಲೆದೋರಬಾರದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಕಾಲೇಜಿನ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯಿಂದ ನೀರು ಶೇಖರಣೆ ಆಗಲಿರುವ ಸ್ಥಳಗಳನ್ನು ಗುರುತಿಸಬೇಕು. ಚೆಕ್ ಡ್ಯಾಂಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಜಿಲ್ಲಾ ಸಾಮಾಜಿಕ ಅರಣ್ಯ ಅಧಿಕಾರಿ ಶ್ರೀನಾಥ್, ವೈದ್ಯಕೀಯ ಶಿಕ್ಷಣ ಕಾಲೇಜು ಕಾಮಗಾರಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಕುಮಾರ್, ಯೋಜನಾ ವ್ಯವಸ್ಥಾಪಕ ದೀಪಕ್, ಆನಂದ್ ಬಾಳಗಿ, ಜೆ.ಇ ರಾಮಚಂದ್ರಪ್ಪ, ಪಿ.ಎಂ.ಸಿ ಶ್ರೀಕಾಂತ್, ಗೌರೀಶ್ ಹಾಗೂ ಆಡಳಿತ ಅಧಿಕಾರಿ ವೇಣುಗೋಪಾಲ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಜಿಲ್ಲೆಯ ಕನಸಿನ ಯೋಜನೆಯಾದ ವೈದ್ಯಕೀಯ ಶಿಕ್ಷಣ ಕಾಲೇಜಿನ ಕಾಮಗಾರಿ ಭರದಿಂದ ನಡೆಯುತ್ತಿದೆ. ಭೌತಿಕವಾಗಿ ಶೇ 45ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಉದ್ಘಾಟನೆಯಾಗಲಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ಅವರು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಲೇಜಿನ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.</p>.<p>ಸಚಿವ ಡಾ.ಕೆ.ಸುಧಾಕರ್ ಅವರ ನಿರ್ದೇಶನದಂತೆ ಕಾಮಗಾರಿ ಸಾಗುತ್ತಿದೆ. ಇಲ್ಲಿಯವರೆಗೆ ₹ 200 ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದೆ. ₹ 134 ಕೋಟಿ ಈಗಾಗಲೇ ಬಿಡುಗಡೆ ಆಗಿದೆ. ಉಳಿಕೆ ಹಣ ಬಿಡುಗಡೆ ಪ್ರಕ್ರಿಯೆಯಲ್ಲಿದೆ ಎಂದರು.</p>.<p>ಕಾಮಗಾರಿ ಪ್ರಕ್ರಿಯೆಗೆ ಇನ್ನಷ್ಟು ವೇಗ ನೀಡಿ ನಿಗದಿತ ಅವಧಿಗಿಂತ ಮುಂಚೆಯೇ ಪೂರ್ಣಗೊಳಿಸಬೇಕು. ಯಾವುದೇ ರೀತಿಯ ಸಮಸ್ಯೆಗಳು ಕಂಡುಬಂದರೆ ಕೂಡಲೇ ತಿಳಿಸಬೇಕು ಎಂದು ಕಾಲೇಜು ನಿರ್ಮಾಣ ಯೋಜನೆಯ ವ್ಯವಸ್ಥಾಪಕರಿಗೆ ಸೂಚಿಸಿದರು.</p>.<p>ಕಾಲೇಜಿನ ಆವರಣದ ಅಂಚಿನ ಅಕ್ಕಪಕ್ಕದ ಖಾಲಿ ಜಾಗ ಗುರುತಿಸಿ 1000ಕ್ಕೂ ಹೆಚ್ಚು ಗಿಡಗಳನ್ನು ಒಂದೆರಡು ದಿನಗಳಲ್ಲಿ ನೆಡಬೇಕು. ಉದ್ಘಾಟನೆ ವೇಳೆಗೆ ಸುಂದರ ಹಸಿರು ವನ ಬೆಳೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸಾಮಾಜಿಕ ಅರಣ್ಯ ಅಧಿಕಾರಿಗೆ ನಿರ್ದೇಶನ ನೀಡಿದರು.</p>.<p>ವೈದ್ಯಕೀಯ ಶಿಕ್ಷಣ ಕಾಲೇಜು ಕಾರ್ಯಾರಂಭವಾದ ಮೇಲೆ ನೀರಿನ ಸಮಸ್ಯೆ ತಲೆದೋರಬಾರದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಕಾಲೇಜಿನ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯಿಂದ ನೀರು ಶೇಖರಣೆ ಆಗಲಿರುವ ಸ್ಥಳಗಳನ್ನು ಗುರುತಿಸಬೇಕು. ಚೆಕ್ ಡ್ಯಾಂಗಳನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.</p>.<p>ಜಿಲ್ಲಾ ಸಾಮಾಜಿಕ ಅರಣ್ಯ ಅಧಿಕಾರಿ ಶ್ರೀನಾಥ್, ವೈದ್ಯಕೀಯ ಶಿಕ್ಷಣ ಕಾಲೇಜು ಕಾಮಗಾರಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಕುಮಾರ್, ಯೋಜನಾ ವ್ಯವಸ್ಥಾಪಕ ದೀಪಕ್, ಆನಂದ್ ಬಾಳಗಿ, ಜೆ.ಇ ರಾಮಚಂದ್ರಪ್ಪ, ಪಿ.ಎಂ.ಸಿ ಶ್ರೀಕಾಂತ್, ಗೌರೀಶ್ ಹಾಗೂ ಆಡಳಿತ ಅಧಿಕಾರಿ ವೇಣುಗೋಪಾಲ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>