‘ನಮ್ಮ ಕ್ಷೇತ್ರದಲ್ಲಿರುವ (ಬ್ಯಾಟರಾಯನಪುರ) ಎಸ್ಟಾರ್ ಸಿಎಂಐ ಆಸ್ಪತ್ರೆಯ ಐಸಿಯು, ಆಮ್ಲಜನಕ ಸೌಲಭ್ಯದ ಹಾಸಿಗೆಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ಮಾತ್ರ ನೀಡಬೇಕು ಎಂದು ಸರ್ಕಾರ ಆದೇಶಿಸಿರುತ್ತದೆ. ಕೋವಿಡ್ ದುರಂತವನ್ನು ನಾವೆಲ್ಲರೂ ಒಂದಾಗಿ ಎದುರಿಸುತ್ತಿರುವ ಸಂದರ್ಭದಲ್ಲಿ, ಈ ರೀತಿಯಾಗಿ ಯಾವುದೇ ಆಸ್ಪತ್ರೆಯ ಸೌಲಭ್ಯವನ್ನು ಕೆಲವರಿಗೆ ಮಾತ್ರ ಸೀಮಿತ ಮಾಡಿ ಅವಶ್ಯಕತೆ ಇರುವಂಥ ಇತರರಿಗೆ ಸಿಗದಂತೆ ಮಾಡುವುದು ಅಮಾನವೀಯ ಹಾಗೂ ಅವಿವೇಕದಿಂದ ಕೂಡಿರುವ ನಿರ್ಧಾರ’ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.