ಈ ಸಂಬಂಧ ಇತ್ತೀಚೆಗೆ ನಡೆದ ಜೂಮ್ ಸಭೆಯಲ್ಲಿ ಶಿಕ್ಷಣ ಇಲಾಖೆ ರಾಜ್ಯ ಯೋಜನಾ ನಿರ್ದೇಶಕರು ಜಿಲ್ಲೆಯ ಈ ಕಾರ್ಯಚಟುವಟಿಗಳ ಕಳಪೆ ಸಾಧನೆಯ ಬಗ್ಗೆ ತೀವ್ರ ಆಕ್ಷೇಪಣೆ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರ ಆಕ್ಷೇಪಣೆ ಹಿನ್ನೆಲೆಯಲ್ಲಿ ಡಿಡಿಪಿಐ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗೆ ಈ ಬಗ್ಗೆ ಪತ್ರ ಸಹ ಬರೆದಿದ್ದಾರೆ.
‘ಅರಣ್ಯ ಇಲಾಖೆ ಸಹಯೋಗ ಅಗತ್ಯ’
ಈ ಕಾರ್ಯಕ್ರಮ ಯಶಸ್ಸು ಆಗಬೇಕು ಎಂದರೆ ಅರಣ್ಯ ಇಲಾಖೆಯ ಸಹಕಾರ ಮತ್ತು ಸಹಯೋಗ ಅತ್ಯಗತ್ಯ. ಅರಣ್ಯ ಇಲಾಖೆಯು ಗಿಡಗಳನ್ನು ನೀಡಿದರೆ ಗುರಿ ಸಾಧನೆ ಸಾಧ್ಯವಾಗುತ್ತದೆ ಎಂದು ಶಿಕ್ಷಕರೊಬ್ಬರು ತಿಳಿಸಿದರು.