ಆಂಧ್ರಪ್ರದೇಶದ ಗಂದೋಡ್ಲಪಲ್ಲಿ ಗ್ರಾಮದ ಶ್ರೀರಾಮುಲು(50) ಕೊಲೆಯಾದ ವ್ಯಕ್ತಿ. ಕೆಂಚೇಪಲ್ಲಿ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಅಲೆಮಾರಿ ಜನಾಂಗದವರು ವಾಸಿಸುತ್ತಿದ್ದರು. ಚಿಂದಿ, ಪ್ಲಾಸ್ಟಿಕ್, ಪೇಪರ್ ವಸ್ತುಗಳನ್ನು ಆಯ್ದು ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಶನಿವಾರ ರಾತ್ರಿ ಕುಡಿದು ಗಲಾಟೆ ಮಾಡಿಕೊಂಡು ಹೊಡೆದಾಡಿಕೊಂಡಿದ್ದಾರೆ.