ಚೇಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೂಗಿರೆಡ್ಡಿಪಲ್ಲಿ ಕೆರೆಯ ಕಟ್ಟೆ ತಿರುವಿನಲ್ಲಿ ನಡೆದಿದೆ.
ತಾಲ್ಲೂಕಿನ ಗೊಟ್ಲಪಲ್ಲಿ ಗ್ರಾಮದ ಭಾನುತೇಜ (16) ಮೃತಪಟ್ಟವರು. ಚೇಳೂರಿನಿಂದ ಗೊಟ್ಲಪಲ್ಲಿ ಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದಾಗ ಮೂಗಿರೆಡ್ಡಿಪಲ್ಲಿ ಕೆರೆ ಕಟ್ಟೆಯ ತಿರುವಿನಲ್ಲಿ ಎದುರುಗಡೆಯಿಂದ ಬಂದ ವಾಹನ ಡಿಕ್ಕಿ ಹೊಡೆದಿದೆ. ದ್ವಿಚಕ್ರವಾಹನ ಸಂಪೂರ್ಣ ಭಸ್ಮವಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ಕುಮಾರ್, ಸರ್ಕಲ್ ಇನ್ಸ್ಪೆಕ್ಟರ್ ಜಿ.ಪಿ. ರಾಜು, ಸಬ್ ಇನ್ಸ್ಪೆಕ್ಟರ್ ಪ್ರತಾಪ್ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.