‘ಊರಿನ ಹದಗೆಟ್ಟ ಸ್ಥಿತಿ ತೋರಿಸಿದರೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಹೊಣೆಗಾರಿಕೆ ಪ್ರದರ್ಶಿಸುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಕೂಡ ಉದ್ಧಟತನದಿಂದ ವರ್ತಿಸುತ್ತಿದ್ದಾರೆ. ಊರಿನಲ್ಲಿ ರೋಗ ಉಲ್ಬಣಿಸಿ ಸಾವು ಸಂಭವಿಸಿದರೆ ಅದಕ್ಕೆ ಯಾರು ಹೊಣೆ, ಸಂಬಂಧಪಟ್ಟವರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ನಾವು ಹೋರಾಟದ ಹಾದಿ ತುಳಿಯುವುದು ಅನಿವಾರ್ಯ’ ಎಂಬುದು ಸ್ಥಳೀಯ ನಿವಾಸಿ ಮುನಿಯಪ್ಪ ಅವರ ಎಚ್ಚರಿಕೆ.