ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಯಕರಾದವರು ಹಿರಿತನ, ಅನುಭವಕ್ಕೆ ತಕ್ಕಂತೆ ಮಾತನಾಡಬೇಕು. ಆಧಾರ ರಹಿತವಾಗಿ ವೈಯಕ್ತಿಕ ನಿಂದನೆ, ಅಪಪ್ರಚಾರ ಮಾಡುವುದು ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ. ಈ ಹಿಂದಿನ ಚುನಾವಣೆಗಳಲ್ಲಿ ಸಿದ್ದರಾಮಯ್ಯ ಅವರು ನನಗೆ ಕಾಂಗ್ರೆಸ್ ಟಿಕೆಟ್ ಕೊಡಲಿಲ್ಲ ನನ್ನ ರಾಜಕೀಯ ಗುರು ಎಸ್.ಎಂ. ಕೃಷ್ಣ ಅವರು ನನಗೆ ಟಿಕೆಟ್ ಕೊಡಿಸಿದ್ದರು. ಈ ವಿಚಾರದಲ್ಲಿ ಡಾ.ಜಿ.ಪರಮೇಶ್ವರ್ ಅವರ ಪಾತ್ರವೂ ಇದೆ’ ಎಂದು ತಿಳಿಸಿದರು.