ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ | ಚುನಾವಣೆ ಬಳಿಕ ಸತ್ಯ ಹೊರಹಾಕುವೆ: ಸುಧಾಕರ್

ಸಿದ್ದರಾಮಯ್ಯ ಮತ್ತು ಕೆ.ಆರ್.ರಮೇಶ್‌ಕುಮಾರ್ ವಿರುದ್ಧ ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಡಾ.ಕೆ.ಸುಧಾಕರ್ ವಾಗ್ದಾಳಿ
Last Updated 3 ಡಿಸೆಂಬರ್ 2019, 15:09 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಸಿದ್ದರಾಮಯ್ಯ ಮತ್ತು ಕೆ.ಆರ್.ರಮೇಶ್‌ಕುಮಾರ್ ಅವರ ಕುರಿತ ಕೆಲ ಸತ್ಯಗಳನ್ನು ಈಗಲೇ ಹೇಳಲು ಉಪ ಚುನಾವಣೆ ಕಾರಣಕ್ಕೆ ಕಷ್ಟವಾಗುತ್ತಿದೆ. ಉಪ ಚುನಾವಣೆ ಫಲಿತಾಂಶದ ಬಳಿಕ ಅವರ ಕುರಿತ ಸತ್ಯಗಳನ್ನು ಜನರ ಮುಂದಿಡುತ್ತೇನೆ’ ಎಂದು ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಯಕರಾದವರು ಹಿರಿತನ, ಅನುಭವಕ್ಕೆ ತಕ್ಕಂತೆ ಮಾತನಾಡಬೇಕು. ಆಧಾರ ರಹಿತವಾಗಿ ವೈಯಕ್ತಿಕ ನಿಂದನೆ, ಅಪಪ್ರಚಾರ ಮಾಡುವುದು ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ. ಈ ಹಿಂದಿನ ಚುನಾವಣೆಗಳಲ್ಲಿ ಸಿದ್ದರಾಮಯ್ಯ ಅವರು ನನಗೆ ಕಾಂಗ್ರೆಸ್‌ ಟಿಕೆಟ್ ಕೊಡಲಿಲ್ಲ ನನ್ನ ರಾಜಕೀಯ ಗುರು ಎಸ್.ಎಂ. ಕೃಷ್ಣ ಅವರು ನನಗೆ ಟಿಕೆಟ್ ಕೊಡಿಸಿದ್ದರು. ಈ ವಿಚಾರದಲ್ಲಿ ಡಾ.ಜಿ.ಪರಮೇಶ್ವರ್ ಅವರ ಪಾತ್ರವೂ ಇದೆ’ ಎಂದು ತಿಳಿಸಿದರು.

‘ರಮೇಶ್ ಕುಮಾರ್ ಅವರು ಹಿಂದೆ ಯಾವುದೋ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಅವರು ನಟನೆಯನ್ನೇ ಮುಂದುವರಿಸಿಕೊಂಡು ಹೋಗಲಿ. ಇವತ್ತು ಕಾಂಗ್ರೆಸ್ ನಾಯಕರು ಹಾಸ್ಯ ನಟರಂತೆ ಮಾತನಾಡುತ್ತಿದ್ದಾರೆ. ಉಪ ಚುನಾವಣೆ ಬಳಿಕ ಅವರಿಗೆ ಏನೂ ಕೆಲಸ ಇರುವುದಿಲ್ಲ. ಹಾಗಾಗಿ ಅವರು ನಟನೆಯನ್ನೇ ಮಾಡಿಕೊಂಡಿರಲಿ’ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT