‘ಸರ್ಕಾರವು ನೀಡುವ ಸೌಲಭ್ಯಗಳು ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ರೈತರಿಗೆ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಯಂ ಪಶು ವೈದ್ಯರ ಸೇವೆ ಇಲ್ಲದೆ ಈ ಭಾಗದ ರೈತರು ಮತ್ತು ಹೈನುದಾರರು ಖಾಸಗಿ ವೈದ್ಯರ ಸೇವೆಯನ್ನು ಅವಲಂಭಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲಾಖೆಯ ಅಧಿಕಾರಿಗಳ ನಿರುತ್ಸಾಹದಿಂದಾಗಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ನಮ್ಮ ದುರ್ದೈವ’ ಎನ್ನುತ್ತಾರೆ ಸ್ಥಳೀಯ ರೈತ ರಾಮಾಂಜಿನಪ್ಪ.