ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ 32 ಕೊರೊನಾ ಪ್ರಕರಣ ದೃಢ

ಕೋವಿಡ್-– 19 ಬಗ್ಗೆ ಆತಂಕ ಬೇಡ, ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಆರ್.ಲತಾ
Last Updated 9 ಜುಲೈ 2020, 9:08 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗೌರಿಬಿದನೂರು, ಚಿಂತಾಮಣಿ, ಚಿಕ್ಕಬಳ್ಳಾಪುರ, ಗುಡಿಬಂಡೆ ತಾಲ್ಲೂಕುಗಳಲ್ಲಿ ಬುಧವಾರ ಒಟ್ಟು 32 ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ.

ಇಷ್ಟು ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ದಾಖಲಾಗಿರುವುದಕ್ಕೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ
ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 89 ಕೋವಿಡ್– 19 ಪ್ರಕರಣ ಕ್ರಿಯಾಶೀಲವಾಗಿದೆ. ಅದರಲ್ಲಿ ಬುಧವಾರ ಒಂದೇ ದಿನದಲ್ಲಿ 32 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ ಗೌರಿಬಿದನೂರಿನಲ್ಲಿ 14, ಚಿಂತಾಮಣಿಯಲ್ಲಿ 13, ಚಿಕ್ಕಬಳ್ಳಾಪುರದಲ್ಲಿ 4, ಗುಡಿಬಂಡೆಯಲ್ಲಿ 1 ಕೊರೊನಾ ಪ್ರಕರಣ ದಾಖಲಾಗಿವೆ.

ಇದರಲ್ಲಿ ಗೌರಿಬಿದನೂರಿನಲ್ಲಿ ಇಬ್ಬರು ಕೊರೊನಾ ಸೋಂಕಿತ ವ್ಯಕ್ತಿಗಳಿಂದ 14 ಜನ ಪ್ರಾಥಮಿಕ ಹಂತದ ಸೋಂಕು ತಗುಲಿದೆ. ಚಿಂತಾಮಣಿಯಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟ ಮಹಿಳೆಯ ಪ್ರಾಥಮಿಕ ಹಂತದ 9 ಜನರಿಗೆ ಹಾಗೂ ಬೆಂಗಳೂರಿನಿಂದ ಚಿಂತಾಮಣಿಗೆ ಪ್ರಯಾಣ ಮಾಡಿದ 5 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದರು.

ಕೋವಿಡ್-19 ತಡೆಗಟ್ಟಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಬಳಸಿ, ಅಂತರ ಕಾಯ್ದುಕೊಳ್ಳುವುದರ ಮೂಲಕ ಕೊರೊನಾ ತಡೆಗಟ್ಟಬಹುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT