<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿ ಗೌರಿಬಿದನೂರು, ಚಿಂತಾಮಣಿ, ಚಿಕ್ಕಬಳ್ಳಾಪುರ, ಗುಡಿಬಂಡೆ ತಾಲ್ಲೂಕುಗಳಲ್ಲಿ ಬುಧವಾರ ಒಟ್ಟು 32 ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ.</p>.<p>ಇಷ್ಟು ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ದಾಖಲಾಗಿರುವುದಕ್ಕೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ<br />ತಿಳಿಸಿದರು.</p>.<p>ಜಿಲ್ಲೆಯಲ್ಲಿ ಒಟ್ಟು 89 ಕೋವಿಡ್– 19 ಪ್ರಕರಣ ಕ್ರಿಯಾಶೀಲವಾಗಿದೆ. ಅದರಲ್ಲಿ ಬುಧವಾರ ಒಂದೇ ದಿನದಲ್ಲಿ 32 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ ಗೌರಿಬಿದನೂರಿನಲ್ಲಿ 14, ಚಿಂತಾಮಣಿಯಲ್ಲಿ 13, ಚಿಕ್ಕಬಳ್ಳಾಪುರದಲ್ಲಿ 4, ಗುಡಿಬಂಡೆಯಲ್ಲಿ 1 ಕೊರೊನಾ ಪ್ರಕರಣ ದಾಖಲಾಗಿವೆ.</p>.<p>ಇದರಲ್ಲಿ ಗೌರಿಬಿದನೂರಿನಲ್ಲಿ ಇಬ್ಬರು ಕೊರೊನಾ ಸೋಂಕಿತ ವ್ಯಕ್ತಿಗಳಿಂದ 14 ಜನ ಪ್ರಾಥಮಿಕ ಹಂತದ ಸೋಂಕು ತಗುಲಿದೆ. ಚಿಂತಾಮಣಿಯಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟ ಮಹಿಳೆಯ ಪ್ರಾಥಮಿಕ ಹಂತದ 9 ಜನರಿಗೆ ಹಾಗೂ ಬೆಂಗಳೂರಿನಿಂದ ಚಿಂತಾಮಣಿಗೆ ಪ್ರಯಾಣ ಮಾಡಿದ 5 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದರು.</p>.<p>ಕೋವಿಡ್-19 ತಡೆಗಟ್ಟಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಬಳಸಿ, ಅಂತರ ಕಾಯ್ದುಕೊಳ್ಳುವುದರ ಮೂಲಕ ಕೊರೊನಾ ತಡೆಗಟ್ಟಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಜಿಲ್ಲೆಯಲ್ಲಿ ಗೌರಿಬಿದನೂರು, ಚಿಂತಾಮಣಿ, ಚಿಕ್ಕಬಳ್ಳಾಪುರ, ಗುಡಿಬಂಡೆ ತಾಲ್ಲೂಕುಗಳಲ್ಲಿ ಬುಧವಾರ ಒಟ್ಟು 32 ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ.</p>.<p>ಇಷ್ಟು ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ದಾಖಲಾಗಿರುವುದಕ್ಕೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ<br />ತಿಳಿಸಿದರು.</p>.<p>ಜಿಲ್ಲೆಯಲ್ಲಿ ಒಟ್ಟು 89 ಕೋವಿಡ್– 19 ಪ್ರಕರಣ ಕ್ರಿಯಾಶೀಲವಾಗಿದೆ. ಅದರಲ್ಲಿ ಬುಧವಾರ ಒಂದೇ ದಿನದಲ್ಲಿ 32 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ ಗೌರಿಬಿದನೂರಿನಲ್ಲಿ 14, ಚಿಂತಾಮಣಿಯಲ್ಲಿ 13, ಚಿಕ್ಕಬಳ್ಳಾಪುರದಲ್ಲಿ 4, ಗುಡಿಬಂಡೆಯಲ್ಲಿ 1 ಕೊರೊನಾ ಪ್ರಕರಣ ದಾಖಲಾಗಿವೆ.</p>.<p>ಇದರಲ್ಲಿ ಗೌರಿಬಿದನೂರಿನಲ್ಲಿ ಇಬ್ಬರು ಕೊರೊನಾ ಸೋಂಕಿತ ವ್ಯಕ್ತಿಗಳಿಂದ 14 ಜನ ಪ್ರಾಥಮಿಕ ಹಂತದ ಸೋಂಕು ತಗುಲಿದೆ. ಚಿಂತಾಮಣಿಯಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟ ಮಹಿಳೆಯ ಪ್ರಾಥಮಿಕ ಹಂತದ 9 ಜನರಿಗೆ ಹಾಗೂ ಬೆಂಗಳೂರಿನಿಂದ ಚಿಂತಾಮಣಿಗೆ ಪ್ರಯಾಣ ಮಾಡಿದ 5 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದರು.</p>.<p>ಕೋವಿಡ್-19 ತಡೆಗಟ್ಟಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಬಳಸಿ, ಅಂತರ ಕಾಯ್ದುಕೊಳ್ಳುವುದರ ಮೂಲಕ ಕೊರೊನಾ ತಡೆಗಟ್ಟಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>