ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ

Last Updated 23 ಮೇ 2020, 20:09 IST
ಅಕ್ಷರ ಗಾತ್ರ

ಚಿಂತಾಮಣಿ: ಹೈದರಾಬಾದ್‌ನಿಂದ ಬಂದಿದ್ದ ಲಾರಿ ಚಾಲಕನಿಗೆ ಕ್ವಾರಂಟೈನ್‌ಗೆ ಒಳಗಾಗಲು ಹೇಳಿದ್ದ ಆಶಾ ಕಾರ್ಯಕರ್ತೆಯ ಮೇಲೆ ಚಾಲಕನ ಸಂಬಂಧಿಕರು ಇಟ್ಟಿಗೆಯಿಂದ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಐಮರೆಡ್ಡಿಹಳ್ಳಿಯಲ್ಲಿ ನಡೆದಿದೆ. ಚಾಲಕ ತಲೆಮರೆಸಿಕೊಂಡಿದ್ದು, ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಚಾಲಕ ನಾಗರಾಜ್ ಅವರಿಗೆ ಕೊರೊನಾ ತಪಾಸಣೆಗೆ ಒಳಗಾಗಲು ಆಶಾ ಕಾರ್ಯಕರ್ತೆ ವೆಂಕಟಲಕ್ಷ್ಮಮ್ಮ ತಿಂಗಳ ಹಿಂದೆ ತಿಳಿಹೇಳಿದ್ದರು. ಆಗ ನಾಗರಾಜ್ ಹೈದರಾಬಾದ್‌ಗೆ ವಾಪಸ್ ಆಗಿದ್ದರು. ಈಚೆಗೆ ಮತ್ತೆ ಗ್ರಾಮಕ್ಕೆ ಮರಳಿದ್ದರು. ಆಶಾ ಕಾರ್ಯಕರ್ತೆ ಮತ್ತೆ ತಪಾಸಣೆಗೆ ಸಲಹೆ ಮಾಡಿದ್ದರು. ಸಿಟ್ಟಿಗೆದ್ದ ನಾಗರಾಜ್, ಹಾಗೂ ಸಂಬಂಧಿಗಳು ಕಾರ್ಯಕರ್ತೆ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT