<p><strong>ಚಿಕ್ಕಬಳ್ಳಾಪುರ: </strong>ತಾಲ್ಲೂಕಿನ ಗುಂಗೀರ್ಲಹಳ್ಳಿ ಗ್ರಾಮದಲ್ಲಿ ನಾಡಬಂದೂಕು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಗಂಗಾಧರಪ್ಪ, ರಾಜ, ಅನಿಲ್ ಬಂಧಿತರು. ಗಂಗಾಧರಪ್ಪ ಗ್ರಾಮದಲ್ಲಿ ಕುಲುಮೆ ನಡೆಸುತ್ತಿದ್ದು, ಅನಿಲ್ ಮತ್ತು ರಾಜ ತಮ್ಮ ಮಾವ ಶಂಕರ್ ಬಳಿ ಇದ್ದ ನಾಡಬಂದೂಕನ್ನು ರಿಪೇರಿ ಮಾಡಿಸಲು ಬಂದಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ರವಿಶಂಕರ್, ನಂದಿ ಪೊಲೀಸ್ ಠಾಣೆ ಪಿಎಸ್ಐ ಎಂ.ಬಿ.ಪಾಟೀಲ್ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>‘ಆರೋಪಿಗಳಿಂದ ನಾಡ ಬಂದೂಕು ತಯಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಯಾರಿಗೆ ಬಂದೂಕುಗಳನ್ನು ಮಾರಾಟ ಮಾಡುತ್ತಿದ್ದರು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.</p>.<p>ಅನಿಲ್ ಮತ್ತು ರಾಜ ಸಮೀಪದ ರಾಗಮಾಕಲಹಳ್ಳಿಯವರಾಗಿದ್ದಾರೆ. ಗಂಗಾಧರಪ್ಪ ತಮ್ಮ ಕುಲುಮೆಯಲ್ಲಿ ವ್ಯವಸಾಯಕ್ಕೆ ಅಗತ್ಯವಾದ ಉಪಕರಣಗಳನ್ನು ರೈತರಿಗೆ ಸಿದ್ಧ ಮಾಡಿಕೊಡುತ್ತಿದ್ದರು. ಇವರಿಗೆ ಬಿಡಿಭಾಗಗಳು ಎಲ್ಲಿ ಸಿಕ್ಕವು ಇತ್ಯಾದಿ ವಿಚಾರಗಳ ಬಗ್ಗೆಯೂ ಸಮಗ್ರವಾಗಿ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ತಾಲ್ಲೂಕಿನ ಗುಂಗೀರ್ಲಹಳ್ಳಿ ಗ್ರಾಮದಲ್ಲಿ ನಾಡಬಂದೂಕು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಗಂಗಾಧರಪ್ಪ, ರಾಜ, ಅನಿಲ್ ಬಂಧಿತರು. ಗಂಗಾಧರಪ್ಪ ಗ್ರಾಮದಲ್ಲಿ ಕುಲುಮೆ ನಡೆಸುತ್ತಿದ್ದು, ಅನಿಲ್ ಮತ್ತು ರಾಜ ತಮ್ಮ ಮಾವ ಶಂಕರ್ ಬಳಿ ಇದ್ದ ನಾಡಬಂದೂಕನ್ನು ರಿಪೇರಿ ಮಾಡಿಸಲು ಬಂದಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ರವಿಶಂಕರ್, ನಂದಿ ಪೊಲೀಸ್ ಠಾಣೆ ಪಿಎಸ್ಐ ಎಂ.ಬಿ.ಪಾಟೀಲ್ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>‘ಆರೋಪಿಗಳಿಂದ ನಾಡ ಬಂದೂಕು ತಯಾರಿಕೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಯಾರಿಗೆ ಬಂದೂಕುಗಳನ್ನು ಮಾರಾಟ ಮಾಡುತ್ತಿದ್ದರು ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.</p>.<p>ಅನಿಲ್ ಮತ್ತು ರಾಜ ಸಮೀಪದ ರಾಗಮಾಕಲಹಳ್ಳಿಯವರಾಗಿದ್ದಾರೆ. ಗಂಗಾಧರಪ್ಪ ತಮ್ಮ ಕುಲುಮೆಯಲ್ಲಿ ವ್ಯವಸಾಯಕ್ಕೆ ಅಗತ್ಯವಾದ ಉಪಕರಣಗಳನ್ನು ರೈತರಿಗೆ ಸಿದ್ಧ ಮಾಡಿಕೊಡುತ್ತಿದ್ದರು. ಇವರಿಗೆ ಬಿಡಿಭಾಗಗಳು ಎಲ್ಲಿ ಸಿಕ್ಕವು ಇತ್ಯಾದಿ ವಿಚಾರಗಳ ಬಗ್ಗೆಯೂ ಸಮಗ್ರವಾಗಿ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>