<p><strong>ಚಿಂತಾಮಣ</strong>: ಆರ್.ಕೆ ವಿಷನ್ ವಿದ್ಯಾ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಹುಲಿ ಸಂರಕ್ಷಣಾ ದಿನಾಚರಣೆ ಮಂಗಳವಾರ ನಡೆಯಿತು.</p>.<p>ಸಂಸ್ಥೆಯ ಕಾರ್ಯದರ್ಶಿ ಕೆ.ಆರ್.ಪ್ರೇಮಲತಾ ಮಾತನಾಡಿ, ಹುಲಿಗಳ ಪ್ರಾಕೃತಿಕ ಆವಾಸಸ್ಥಾನಗಳ ಸಂರಕ್ಷಣೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ 2010ರಿಂದ ಪ್ರತಿವರ್ಷ ಜುಲೈ 29ರಂದು ಹುಲಿ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಹುಲಿ, ಚಿರತೆ, ಸಿಂಹಗಳಂತಹ ಪ್ರಾಣಿಗಳು ಕಾಡು ಮತ್ತು ಅಭಯಾರಣ್ಯದ ಪ್ರಮುಖ ಆಕರ್ಷಣೆಗಳಾಗಿವೆ. ಹುಲಿ ಸ್ವಾಭಾವಿಕ ಸೌಂದರ್ಯ, ಆತ್ಮವಿಶ್ವಾಸ ಮತ್ತು ಗಾಂಭೀರ್ಯದ ನಡಿಗೆಗೆ ಹೆಸರುವಾಸಿಯಾಗಿದೆ. ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡುವಲ್ಲಿ ಮತ್ತು ಜೀವ ವೈವಿಧ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.</p>.<p>ವಿದ್ಯಾರ್ಥಿಗಳು ಹುಲಿಗಳ ಜೀವನಕ್ಕೆ ಸಂಬಂಧಿಸಿದ ಮತ್ತು ಅವುಗಳ ಸಂರಕ್ಷಣೆಗಾಗಿ ಜನಜಾಗೃತಿ ಮೂಡಿಸುವ ಭಿತ್ತಿಪತ್ರ ಪ್ರದರ್ಶನ ಏರ್ಪಡಿಸಿದ್ದರು. ನಿರ್ದೇಶಕ ಜಿವಿಕೆ ರೆಡ್ಡಿ, ತನುಶ್ರೀರಾಮ್, ವರುಣ್ ಕೆ.ವಿ, ಶಿಕ್ಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣ</strong>: ಆರ್.ಕೆ ವಿಷನ್ ವಿದ್ಯಾ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಹುಲಿ ಸಂರಕ್ಷಣಾ ದಿನಾಚರಣೆ ಮಂಗಳವಾರ ನಡೆಯಿತು.</p>.<p>ಸಂಸ್ಥೆಯ ಕಾರ್ಯದರ್ಶಿ ಕೆ.ಆರ್.ಪ್ರೇಮಲತಾ ಮಾತನಾಡಿ, ಹುಲಿಗಳ ಪ್ರಾಕೃತಿಕ ಆವಾಸಸ್ಥಾನಗಳ ಸಂರಕ್ಷಣೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ 2010ರಿಂದ ಪ್ರತಿವರ್ಷ ಜುಲೈ 29ರಂದು ಹುಲಿ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಹುಲಿ, ಚಿರತೆ, ಸಿಂಹಗಳಂತಹ ಪ್ರಾಣಿಗಳು ಕಾಡು ಮತ್ತು ಅಭಯಾರಣ್ಯದ ಪ್ರಮುಖ ಆಕರ್ಷಣೆಗಳಾಗಿವೆ. ಹುಲಿ ಸ್ವಾಭಾವಿಕ ಸೌಂದರ್ಯ, ಆತ್ಮವಿಶ್ವಾಸ ಮತ್ತು ಗಾಂಭೀರ್ಯದ ನಡಿಗೆಗೆ ಹೆಸರುವಾಸಿಯಾಗಿದೆ. ಪರಿಸರ ವ್ಯವಸ್ಥೆಯನ್ನು ಸಮತೋಲನದಲ್ಲಿಡುವಲ್ಲಿ ಮತ್ತು ಜೀವ ವೈವಿಧ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.</p>.<p>ವಿದ್ಯಾರ್ಥಿಗಳು ಹುಲಿಗಳ ಜೀವನಕ್ಕೆ ಸಂಬಂಧಿಸಿದ ಮತ್ತು ಅವುಗಳ ಸಂರಕ್ಷಣೆಗಾಗಿ ಜನಜಾಗೃತಿ ಮೂಡಿಸುವ ಭಿತ್ತಿಪತ್ರ ಪ್ರದರ್ಶನ ಏರ್ಪಡಿಸಿದ್ದರು. ನಿರ್ದೇಶಕ ಜಿವಿಕೆ ರೆಡ್ಡಿ, ತನುಶ್ರೀರಾಮ್, ವರುಣ್ ಕೆ.ವಿ, ಶಿಕ್ಷಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>