<p><strong>ಗೌರಿಬಿದನೂರು: </strong>ನರೇಗಾ ಯೋಜನೆಗೆ ಹೆಚ್ಚುವರಿಯಾಗಿ ₹ 1 ಲಕ್ಷ ಅನುದಾನ ನೀಡಬೇಕು ಎಂದು ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ಒತ್ತಾಯಿಸಿದರು.</p>.<p>ಸಿಐಟಿ ಜಿಲ್ಲಾ ಕಾರ್ಯದರ್ಶಿ ಸಿದ್ದಗಂಗಪ್ಪ ಮಾತನಾಡಿ, ಕೂಲಿ ಕಾರ್ಮಿಕ ಕುಟುಂಬಗಳಿಗೆ ತಿಂಗಳಿಗೆ ₹ 7,500ರನ್ನು ಕನಿಷ್ಠ 3 ತಿಂಗಳು ನೀಡಬೇಕು. ವಲಸೆ ಕಾರ್ಮಿಕ ಕುಟುಂಬಗಳಿಗೆ ವಿಶೇಷ ಆರ್ಥಿಕ ನೆರವು ಹಾಗೂ ಅಪಘಾತದಲ್ಲಿ ಮೃತಪಟ್ಟವರಿಗೆ ಮತ್ತು ಆತ್ಮಹತ್ಯೆ ಮಾಡಿಕೊಂಡವರಿಗೆ ಗರಿಷ್ಠ ಪರಿಹಾರ ನೀಡಬೇಕು ಎಂದರು.</p>.<p>ಸರ್ಕಾರಿ ಭೂಮಿಯನ್ನು ಭೂಮಿ ರಹಿತ ಕೃಷಿ ಕೂಲಿಕಾರರಿಗೆ ಹಾಗೂ ದಲಿತರಿಗೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್.ಆರ್. ರವಿಚಂದ್ರರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ಘೋಷಿಸಿರುವ ₹ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ನಿಂದ ಸಾಮಾನ್ಯ ಜನರಿಗೆ ಉಪಯೋಗವಿಲ್ಲ. ಕೇಂದ್ರದ ನೀತಿಗಳಿಂದಾಗಿ ಕಾರ್ಮಿಕರು, ರೈತರು ಮತ್ತು ಬಡವರಿಗೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರ್ಪೋರೇಟ್ ಕಂಪನಿಗಳಿಗೆ ಮಣೆ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ರತ್ನಮ್ಮ, ವೆಂಕಟಸ್ವಾಮಿ, ನಾಗಪ್ಪ, ಅಶ್ವತ್ಥ, ಆನೂಡಿ ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು: </strong>ನರೇಗಾ ಯೋಜನೆಗೆ ಹೆಚ್ಚುವರಿಯಾಗಿ ₹ 1 ಲಕ್ಷ ಅನುದಾನ ನೀಡಬೇಕು ಎಂದು ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ಒತ್ತಾಯಿಸಿದರು.</p>.<p>ಸಿಐಟಿ ಜಿಲ್ಲಾ ಕಾರ್ಯದರ್ಶಿ ಸಿದ್ದಗಂಗಪ್ಪ ಮಾತನಾಡಿ, ಕೂಲಿ ಕಾರ್ಮಿಕ ಕುಟುಂಬಗಳಿಗೆ ತಿಂಗಳಿಗೆ ₹ 7,500ರನ್ನು ಕನಿಷ್ಠ 3 ತಿಂಗಳು ನೀಡಬೇಕು. ವಲಸೆ ಕಾರ್ಮಿಕ ಕುಟುಂಬಗಳಿಗೆ ವಿಶೇಷ ಆರ್ಥಿಕ ನೆರವು ಹಾಗೂ ಅಪಘಾತದಲ್ಲಿ ಮೃತಪಟ್ಟವರಿಗೆ ಮತ್ತು ಆತ್ಮಹತ್ಯೆ ಮಾಡಿಕೊಂಡವರಿಗೆ ಗರಿಷ್ಠ ಪರಿಹಾರ ನೀಡಬೇಕು ಎಂದರು.</p>.<p>ಸರ್ಕಾರಿ ಭೂಮಿಯನ್ನು ಭೂಮಿ ರಹಿತ ಕೃಷಿ ಕೂಲಿಕಾರರಿಗೆ ಹಾಗೂ ದಲಿತರಿಗೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್.ಆರ್. ರವಿಚಂದ್ರರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ಘೋಷಿಸಿರುವ ₹ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ನಿಂದ ಸಾಮಾನ್ಯ ಜನರಿಗೆ ಉಪಯೋಗವಿಲ್ಲ. ಕೇಂದ್ರದ ನೀತಿಗಳಿಂದಾಗಿ ಕಾರ್ಮಿಕರು, ರೈತರು ಮತ್ತು ಬಡವರಿಗೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರ್ಪೋರೇಟ್ ಕಂಪನಿಗಳಿಗೆ ಮಣೆ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ರತ್ನಮ್ಮ, ವೆಂಕಟಸ್ವಾಮಿ, ನಾಗಪ್ಪ, ಅಶ್ವತ್ಥ, ಆನೂಡಿ ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>