<p><strong>ಗೌರಿಬಿದನೂರು:</strong> ನಗರದ ಡಾ.ಎಚ್.ಎನ್ ಕಲಾಮಂದಿರದಲ್ಲಿ ಇದೇ 27ರಂದು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಒಂಬತ್ತನೇ ತಾಲ್ಲೂಕು ಕನ್ನಡ ಸಾಹಿತ್ಯ<br />ಸಮ್ಮೇಳನ ಆಯೋಜಿಸಲಾಗಿದೆ.</p>.<p>ಲೇಖಕ ಹಾಗೂ ನಿವೃತ್ತ ಪ್ರಾಂಶುಪಾಲ ನಗರಗೆರೆಯ ಪ್ರೊ.ಎನ್. ರಮೇಶ್ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.</p>.<p>ಶುಕ್ರವಾರ ಬೆಳಿಗ್ಗೆ ಡಾ.ಎನ್.ಎನ್ ಕಲಾಮಂದಿರದ ಮುಂಭಾಗ ತಹಶೀಲ್ದಾರ್ ಎಚ್. ಶ್ರೀನಿವಾಸ್, ನಗರಸಭೆ ಆಯುಕ್ತೆ ಡಿ.ಎಂ. ಗೀತಾ, ತಾಲ್ಲೂಕು ಕಸಾಪ ಅಧ್ಯಕ್ಷ ಟಿ.ನಂಜುಂಡಪ್ಪ ಅವರ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ.</p>.<p>ಬಳಿಕ ಕನ್ನಡ ಮಾತೆ ಭುವನೇಶ್ವರಿ ಭಾವಚಿತ್ರದೊಂದಿಗೆ ರಥದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರನ್ನು ನಗರದ ವಾಲ್ಮೀಕಿ ವೃತ್ತದಿಂದ ಪೂರ್ಣಕುಂಭ ಕಳಸಗಳೊಂದಿಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ. ಸಿಪಿಐ ಕೆ.ಪಿ. ಸತ್ಯನಾರಾಯಣ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.</p>.<p>ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಜಿ. ವೇಣುಗೋಪಾಲರೆಡ್ಡಿ, ಕಸಾಪ ಜಿಲ್ಲಾಧ್ಯಕ್ಷ ಪ್ರೊ. ಕೋಡಿರಂಗಪ್ಪ, ತಾಲ್ಲೂಕು ಅಧ್ಯಕ್ಷ ಟಿ. ನಂಜುಂಡಪ್ಪ, ನಗರಸಭೆ ಅಧ್ಯಕ್ಷೆ ಎಸ್. ರೂಪ ಅನಂತರಾಜು ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.</p>.<p>ವೇದಿಕೆಯಲ್ಲಿ ವಿಚಾರ ಗೋಷ್ಠಿ, ಕವಿಗೋಷ್ಠಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ ಸನ್ಮಾನ ಸೇರಿದಂತೆ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.</p>.<p class="Subhead">ಸಮ್ಮೇಳನಾಧ್ಯಕ್ಷರ ಪರಿಚಯ:ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ನಗರಗೆರೆ ಪ್ರೊ. ಎನ್. ರಮೇಶ್ ಅವರು 1948ರಲ್ಲಿ ಜನಿಸಿದ್ದು, ತಾಯಿ ಶಾರದಮ್ಮ, ತಂದೆ ನಾರಾಯಣರಾವ್. ಇವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ತಾಲ್ಲೂಕಿನಲ್ಲಿಯೇ ಪೂರೈಸಿ, 1970ರಲ್ಲಿ ತಿರುಪತಿಯ<br />ವೆಂಕಟೇಶ್ವರ ವಿದ್ಯಾಲಯದಲ್ಲಿ ಆಂಗ್ಲ ಭಾಷೆಯಲ್ಲಿ ಎಂ.ಎ ಸ್ನಾತಕೋತ್ತರ ಪದವಿ<br />ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ನಗರದ ಡಾ.ಎಚ್.ಎನ್ ಕಲಾಮಂದಿರದಲ್ಲಿ ಇದೇ 27ರಂದು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಒಂಬತ್ತನೇ ತಾಲ್ಲೂಕು ಕನ್ನಡ ಸಾಹಿತ್ಯ<br />ಸಮ್ಮೇಳನ ಆಯೋಜಿಸಲಾಗಿದೆ.</p>.<p>ಲೇಖಕ ಹಾಗೂ ನಿವೃತ್ತ ಪ್ರಾಂಶುಪಾಲ ನಗರಗೆರೆಯ ಪ್ರೊ.ಎನ್. ರಮೇಶ್ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.</p>.<p>ಶುಕ್ರವಾರ ಬೆಳಿಗ್ಗೆ ಡಾ.ಎನ್.ಎನ್ ಕಲಾಮಂದಿರದ ಮುಂಭಾಗ ತಹಶೀಲ್ದಾರ್ ಎಚ್. ಶ್ರೀನಿವಾಸ್, ನಗರಸಭೆ ಆಯುಕ್ತೆ ಡಿ.ಎಂ. ಗೀತಾ, ತಾಲ್ಲೂಕು ಕಸಾಪ ಅಧ್ಯಕ್ಷ ಟಿ.ನಂಜುಂಡಪ್ಪ ಅವರ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ.</p>.<p>ಬಳಿಕ ಕನ್ನಡ ಮಾತೆ ಭುವನೇಶ್ವರಿ ಭಾವಚಿತ್ರದೊಂದಿಗೆ ರಥದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರನ್ನು ನಗರದ ವಾಲ್ಮೀಕಿ ವೃತ್ತದಿಂದ ಪೂರ್ಣಕುಂಭ ಕಳಸಗಳೊಂದಿಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ. ಸಿಪಿಐ ಕೆ.ಪಿ. ಸತ್ಯನಾರಾಯಣ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.</p>.<p>ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಜಿ. ವೇಣುಗೋಪಾಲರೆಡ್ಡಿ, ಕಸಾಪ ಜಿಲ್ಲಾಧ್ಯಕ್ಷ ಪ್ರೊ. ಕೋಡಿರಂಗಪ್ಪ, ತಾಲ್ಲೂಕು ಅಧ್ಯಕ್ಷ ಟಿ. ನಂಜುಂಡಪ್ಪ, ನಗರಸಭೆ ಅಧ್ಯಕ್ಷೆ ಎಸ್. ರೂಪ ಅನಂತರಾಜು ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.</p>.<p>ವೇದಿಕೆಯಲ್ಲಿ ವಿಚಾರ ಗೋಷ್ಠಿ, ಕವಿಗೋಷ್ಠಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ ಸನ್ಮಾನ ಸೇರಿದಂತೆ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.</p>.<p class="Subhead">ಸಮ್ಮೇಳನಾಧ್ಯಕ್ಷರ ಪರಿಚಯ:ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ನಗರಗೆರೆ ಪ್ರೊ. ಎನ್. ರಮೇಶ್ ಅವರು 1948ರಲ್ಲಿ ಜನಿಸಿದ್ದು, ತಾಯಿ ಶಾರದಮ್ಮ, ತಂದೆ ನಾರಾಯಣರಾವ್. ಇವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ತಾಲ್ಲೂಕಿನಲ್ಲಿಯೇ ಪೂರೈಸಿ, 1970ರಲ್ಲಿ ತಿರುಪತಿಯ<br />ವೆಂಕಟೇಶ್ವರ ವಿದ್ಯಾಲಯದಲ್ಲಿ ಆಂಗ್ಲ ಭಾಷೆಯಲ್ಲಿ ಎಂ.ಎ ಸ್ನಾತಕೋತ್ತರ ಪದವಿ<br />ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>