‘ವೈದ್ಯಕೀಯ ಕಾಲೇಜು ಚಿಕ್ಕಬಳ್ಳಾಪುರದ ಆಸ್ತಿ. ಯಾವುದೇ ಕಾರಣಕ್ಕೂ ಇದನ್ನು ಬಿಟ್ಟುಕೊಡುವುದಿಲ್ಲ. ಆದ್ದರಿಂದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಹಾಗೂ ಜಿಲ್ಲೆಯ ಎಲ್ಲಾ ನಾಗರಿಕ ಬಂಧುಗಳು, ಎಲ್ಲಾ ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು, ರೈತ ಮುಖಂಡರು, ಮಹಿಳಾ ಮುಖಂಡರು ಪಕ್ಷಾತೀತವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ನಮ್ಮ ಆಸ್ತಿಯಾದ ವೈದ್ಯಕೀಯ ಕಾಲೇಜು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ’ ಎಂದು ಹೇಳಲಾಗಿದೆ.