<p><strong>ಚಿಕ್ಕಬಳ್ಳಾಪುರ: </strong>ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಹಾರೋಬಂಡೆ ಬಳಿ ಭಾನುವಾರ ನಸುಕಿನ ಜಾವ ಕಳ್ಳರ ತಂಡವೊಂದು ದನದ ವ್ಯಾಪಾರಿಗಳ ಕಾರು ಅಡ್ಡಗಟ್ಟಿ, ಒಬ್ಬರಿಗೆ ಚಾಕುವಿನಿಂದ ಇರಿದು ವ್ಯಾಪಾರಿಗಳ ಬಳಿ ಇದ್ದ ₹3.10 ಲಕ್ಷ ನಗದು ಮತ್ತು ಮೂರು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದೆ.</p>.<p>ಬೆಂಗಳೂರಿನ ಶಿವಾಜಿ ನಗರದ ಸಾಧಿಕ್, ಫಕ್ರುದ್ದೀನ್ ಬಾಬಾ, ಮುಷರಫ್ ಹಾಗೂ ಅರುಣ್ ಎಂಬುವವರು ಆಂಧ್ರಪ್ರದೇಶದ ರಾಯಲ್ ಸೀಮಾದಲ್ಲಿ ಭಾನುವಾರ ನಡೆಯುವ ದನಗಳ ಸಂತೆಗೆ ಬಾಡಿಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ನಸುಕಿನ ಮೂರೂವರೆ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.</p>.<p>ಮತ್ತೊಂದು ಕಾರಿನಲ್ಲಿ ಬಂದ ನಾಲ್ಕು ಮಂದಿ ಮುಸುಕುಧಾರಿ ಖದೀಮರ ತಂಡ ವ್ಯಾಪಾರಿಗಳ ಕಾರನ್ನು ಅಡ್ಡಗಟ್ಟಿದೆ. ಈ ವೇಳೆ ಕಳ್ಳರು ಸಾಧಿಕ್ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪ್ರಾಣಭೀತಿ ಹುಟ್ಟಿಸಿ ಹಣ, ಮೊಬೈಲ್ ಕಸಿದುಕೊಂಡಿದ್ದಾರೆ. ಗಾಯಾಳು ಸಾಧಿಕ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಹಾಸ್ಮಾಟ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಾಡಿಗೆ ಕಾರಿನ ಚಾಲಕ, ಹಾರೋಬಂಡೆ ಪಕ್ಕದ ಗುಂಡ್ಲುಗುರ್ಕಿ ನಿವಾಸಿ ವಿಜಯ್ ಕುಮಾರ್ ಮೇಲೆ ಅನುಮಾನ ವ್ಯಕ್ತಪಡಿಸಿ, ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಹಾರೋಬಂಡೆ ಬಳಿ ಭಾನುವಾರ ನಸುಕಿನ ಜಾವ ಕಳ್ಳರ ತಂಡವೊಂದು ದನದ ವ್ಯಾಪಾರಿಗಳ ಕಾರು ಅಡ್ಡಗಟ್ಟಿ, ಒಬ್ಬರಿಗೆ ಚಾಕುವಿನಿಂದ ಇರಿದು ವ್ಯಾಪಾರಿಗಳ ಬಳಿ ಇದ್ದ ₹3.10 ಲಕ್ಷ ನಗದು ಮತ್ತು ಮೂರು ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದೆ.</p>.<p>ಬೆಂಗಳೂರಿನ ಶಿವಾಜಿ ನಗರದ ಸಾಧಿಕ್, ಫಕ್ರುದ್ದೀನ್ ಬಾಬಾ, ಮುಷರಫ್ ಹಾಗೂ ಅರುಣ್ ಎಂಬುವವರು ಆಂಧ್ರಪ್ರದೇಶದ ರಾಯಲ್ ಸೀಮಾದಲ್ಲಿ ಭಾನುವಾರ ನಡೆಯುವ ದನಗಳ ಸಂತೆಗೆ ಬಾಡಿಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ನಸುಕಿನ ಮೂರೂವರೆ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.</p>.<p>ಮತ್ತೊಂದು ಕಾರಿನಲ್ಲಿ ಬಂದ ನಾಲ್ಕು ಮಂದಿ ಮುಸುಕುಧಾರಿ ಖದೀಮರ ತಂಡ ವ್ಯಾಪಾರಿಗಳ ಕಾರನ್ನು ಅಡ್ಡಗಟ್ಟಿದೆ. ಈ ವೇಳೆ ಕಳ್ಳರು ಸಾಧಿಕ್ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪ್ರಾಣಭೀತಿ ಹುಟ್ಟಿಸಿ ಹಣ, ಮೊಬೈಲ್ ಕಸಿದುಕೊಂಡಿದ್ದಾರೆ. ಗಾಯಾಳು ಸಾಧಿಕ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಹಾಸ್ಮಾಟ್ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಾಡಿಗೆ ಕಾರಿನ ಚಾಲಕ, ಹಾರೋಬಂಡೆ ಪಕ್ಕದ ಗುಂಡ್ಲುಗುರ್ಕಿ ನಿವಾಸಿ ವಿಜಯ್ ಕುಮಾರ್ ಮೇಲೆ ಅನುಮಾನ ವ್ಯಕ್ತಪಡಿಸಿ, ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>