ಬಾಗೇಪಲ್ಲಿ: ‘ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳಲ್ಲಿ ಜನರಿಗೆ ಸೇವಾ ಕೇಂದ್ರದ ಮೂಲಕ ಸರ್ಕಾರದ ಯೋಜನೆಗಳು ಸೇರಿದಂತೆ 750ಕ್ಕೂ ಸೇವೆ ನೀಡಲಾಗುವುದು’ ಎಂದು ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಜಿ.ಪಿ. ಗಿರೀಶ್ ತಿಳಿಸಿದರು.
ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಕೇಂದ್ರ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗ್ರಾಮಮಟ್ಟದ ಕಾರ್ಯ ನಿರ್ವಾಹಕರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸತ್ಯಸಾಯಿ ಧರ್ಮಶಾಲಾ ಅಧ್ಯಕ್ಷ ಕೆ.ಎಂ. ನಾಗರಾಜ್, ತಾಲ್ಲೂಕು ಮೇಲ್ವಿಚಾರಕಿ ಸಾರಮ್ಮ, ಉಪನ್ಯಾಸಕರಾದ ರಾಜೇಶ್, ಪ್ರಬಂಧಕ ಅರುಣ್, ಸುಮನ್, ಧನಂಜಯ್ ಇದ್ದರು.