ಚಿಕ್ಕಬಳ್ಳಾಪುರ: ‘ಗಣಿಗಾರಿಕೆಗೆ ಸಂಬಂಧಿಸಿದ ವಾಹನಗಳು ನಗರ ಪ್ರದೇಶದ ರಸ್ತೆಗಳು ಹಾಗೂ ಜನನಿಬಿಡ ರಸ್ತೆಗಳಲ್ಲಿ ಸಾಗುವುದನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. ಹೆದ್ದಾರಿಗಳಲ್ಲಿ ಸಂಚರಿಸಬೇಕು’– ಇತ್ತೀಚೆಗೆ ತಾಲ್ಲೂಕಿನ ಪೆರೇಸಂದ್ರದಲ್ಲಿ ನಡೆದಗಣಿ ಮಾಲೀಕರು ಮತ್ತು ಗಣಿಗಾರಿಕೆಗೆ ಸಂಬಂಧಿಸಿದ ವಾಹನಗಳ ಚಾಲಕರ ಸಭೆಯಲ್ಲಿ ಡಿವೈಎಸ್ಪಿ ವಿ.ಕೆ.ವಾಸುದೇವ್ ನೀಡಿದ್ದ ಎಚ್ಚರಿಕೆ ಇದು.