ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್ ಕಳವು: ಇಬ್ಬರ ಸೆರೆ

Last Updated 9 ನವೆಂಬರ್ 2020, 22:00 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರವಾಹನ ಕದಿಯುತ್ತಿದ್ದ ಯುವಕರಿಬ್ಬರನ್ನು ನಗರ ಠಾಣೆಯ ಪೊಲೀಸರು ಸೋಮವಾರಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹ 4.70 ಲಕ್ಷ ಮೌಲ್ಯದ ಐದು ಬೈಕ್‌ ವಶಪಡಿಸಿಕೊಳ್ಳಲಾಗಿದೆ.

ದೇವನಹಳ್ಳಿ ತಾಲ್ಲೂಕಿನ ರೆಡ್ಡಿಹಳ್ಳಿಯ ಕುಶಾಂತ್ ಹಾಗೂ ಚಿಕ್ಕಬಳ್ಳಾಪುರ ತಾಲ್ಲೂಕಿನ ನೆಲಮಾಕನಹಳ್ಳಿಯ ಸಾಗರ್ ಬಂಧಿತರು. ಮತ್ತೊಬ್ಬ ಆರೋಪಿ ಬೆಂಗಳೂರಿನ ನಾಗರಬಾವಿಯ ಮದನ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ನಗರದ ಜೌಗುಪೇಟೆಯ ನಿವಾಸಿ ಎಸ್. ರಾಕೇಶ್ ಎಂಬುವವರು ಮನೆಯ ಮುಂಭಾಗ ನಿಲ್ಲಿಸಿದ್ದ ಕೆಟಿಎಂ ಬೈಕ್ ಕಳುವಾದ ಬಗ್ಗೆ ನಗರ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಿದ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ ಕೆ. ಸತೀಶ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT