<p><strong>ಗುಡಿಬಂಡೆ</strong>: ಗುಡಿಬಂಡೆ– ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ಎರಡು ಬೈಕ್ಗಳು ಭಾನುವಾರ ಮುಖಮುಖಿ ಡಿಕ್ಕಿ ಹೊಡೆದು ಬೈಕ್ ಸವಾರನ ಕಾಲು ಮುರಿದಿದ್ದು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>ಕಾಲುಮುರಿದು ಸವಾರ ಆಂಧ್ರಪ್ರದೇಶದ ಹಿಂದೂಪುರ ತಾಲ್ಲೂಕಿನ ಮೈದಗೋಲಂ ನಿವಾಸಿ ಮೂರ್ತಿ (28) ಹಾಗೂ ಬಳ್ಳಾರಿ ಮೂಲದವಾಸಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ರುತ್ವಿಕ್ (26) ಎಂದು ಗುರುತಿಸಲಾಗಿದೆ.</p>.<p>ಮೂರ್ತಿ ಅವರು ಕೆಲಸಕ್ಕೆ ತಮ್ಮ ಸ್ವಗ್ರಾಮದಿಂದ ಗುಡಿಬಂಡೆ ಮಾರ್ಗವಾಗಿ ಚಿಕ್ಕಬಳ್ಳಾಪುರಕ್ಕೆ ಬೈಕ್ನಲ್ಲಿ ಹೋಗುತ್ತಿದ್ದರು. ಬೆಂಗಳೂರು ಕಡೆಯಿಂದ ವಾಟದಹೊಸಹಳ್ಳಿ ಕೆರೆ ವೀಕ್ಷಣೆಗೆ ಬೈಕ್ನಲ್ಲಿ ಪ್ರವಾಸಕ್ಕೆ ತೆರಳಿದ್ದ ರುತ್ವಿಕ್ ಅವರ ಬೈಕ್ಗಳು ಕಣಿವೆಯ ತಿರುವಿನಲ್ಲಿ ಡಿಕ್ಕಿಯಾಗಿವೆ.</p>.<p>ಗುಡಿಬಂಡೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ</strong>: ಗುಡಿಬಂಡೆ– ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ಎರಡು ಬೈಕ್ಗಳು ಭಾನುವಾರ ಮುಖಮುಖಿ ಡಿಕ್ಕಿ ಹೊಡೆದು ಬೈಕ್ ಸವಾರನ ಕಾಲು ಮುರಿದಿದ್ದು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>ಕಾಲುಮುರಿದು ಸವಾರ ಆಂಧ್ರಪ್ರದೇಶದ ಹಿಂದೂಪುರ ತಾಲ್ಲೂಕಿನ ಮೈದಗೋಲಂ ನಿವಾಸಿ ಮೂರ್ತಿ (28) ಹಾಗೂ ಬಳ್ಳಾರಿ ಮೂಲದವಾಸಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ರುತ್ವಿಕ್ (26) ಎಂದು ಗುರುತಿಸಲಾಗಿದೆ.</p>.<p>ಮೂರ್ತಿ ಅವರು ಕೆಲಸಕ್ಕೆ ತಮ್ಮ ಸ್ವಗ್ರಾಮದಿಂದ ಗುಡಿಬಂಡೆ ಮಾರ್ಗವಾಗಿ ಚಿಕ್ಕಬಳ್ಳಾಪುರಕ್ಕೆ ಬೈಕ್ನಲ್ಲಿ ಹೋಗುತ್ತಿದ್ದರು. ಬೆಂಗಳೂರು ಕಡೆಯಿಂದ ವಾಟದಹೊಸಹಳ್ಳಿ ಕೆರೆ ವೀಕ್ಷಣೆಗೆ ಬೈಕ್ನಲ್ಲಿ ಪ್ರವಾಸಕ್ಕೆ ತೆರಳಿದ್ದ ರುತ್ವಿಕ್ ಅವರ ಬೈಕ್ಗಳು ಕಣಿವೆಯ ತಿರುವಿನಲ್ಲಿ ಡಿಕ್ಕಿಯಾಗಿವೆ.</p>.<p>ಗುಡಿಬಂಡೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>