ಚಿಂತಾಮಣಿ: ತಾಲ್ಲೂಕಿನ ಮೂಗಲಮರಿ ಗ್ರಾಮದಲ್ಲಿಭಾನುವಾರ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬರಲಿಲ್ಲ, ವೈದ್ಯರು ಕೂಡಲೇ ಚಿಕಿತ್ಸೆ ನೀಡಲಿಲ್ಲ ಎಂದು ಆರೋಪಿಸಿ ಮೃತ ಬಾಲಕರ ಕಡೆಯ ಗುಂಪೊಂದು ನಗರದ ಸರ್ಕಾರಿ ಆಸ್ಪತ್ರೆಯ ಕಿಟಕಿ, ಬಾಗಿಲುಗಳ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ.