ಮೇ 15ರಂದು ಇದೇ ರೀತಿ ಜಿಂಕೆಯೊಂದು ಮೃತಪಟ್ಟಿತ್ತು. ಗ್ರಾಮಸ್ಥರು ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತಪಡಿಸಿದ್ದರು. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗ್ರಾಮಸ್ಥರ ಒತ್ತಾಯಕ್ಕೆ ಮಣಿದು ಬೋನ್ ಇಟ್ಟಿದ್ದರು. ಗ್ರಾಮದ ರೈತ ಹರೀಶ್ ಎಂಬುವವರ ಜಮೀನಿನಲ್ಲಿ ಜಿಂಕೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.