<p><strong>ಚಿಂತಾಮಣಿ:</strong> ತಾಲ್ಲೂಕಿನ ಕೋರ್ಲಪರ್ತಿ ಗ್ರಾಮದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಕ್ಲಿನಿಕ್ಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಮಚಂದ್ರಾರೆಡ್ಡಿ ನೇತೃತ್ವದ ತಂಡ ಭೇಟಿ ನೀಡಿ ಸೋಮವಾರ ಬೀಗ ಜಡಿಯಲಾಗಿದೆ.</p>.<p>ಡಾ.ಶ್ರೀರಾಮ ರೆಡ್ಡಿ ಅವರ ವಿದ್ಯಾಭ್ಯಾಸದ ದಾಖಲಾತಿ ಪರಿಶೀಲಿಸಿದಾಗ ಅವರ ಬಳಿ ಯಾವುದೇ ದಾಖಲೆ ಹಾಗೂ ಪರವಾನಗಿ ಇಲ್ಲ. ಹಾಗಾಗಿ ಕೆಪಿಎಂಇ ಕಾಯ್ದೆ ಅಡಿಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ಪ್ರಾಥಮಿಕ ವರದಿ ಮಾಡಿ, ಕ್ಲಿನಿಕ್ ಬಂದ್ ಮಾಡಿರುವ ಬಗ್ಗೆ ತಿಳಿಸಲಾಗಿದೆ.</p>.<p>ಶ್ರೀರಾಮ ರೆಡ್ಡಿ ಈ ಮೊದಲು ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದದರು. ಅಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿ ಶಿಸ್ತಿನ ಕ್ರಮಕ್ಕೆ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಎಫ್ಐಆರ್ ಆಗಿದ್ದು, ₹ 25 ಸಾವಿರ ದಂಡ ವಿಧಿಸಲಾಗಿತ್ತು. ಆದರೆ, ಶ್ರೀರಾಮ ರೆಡ್ಡಿ ಯಾವುದೇ ದಂಡ ಪಾವತಿಸದೆ, ಮತ್ತೆ ಕೋರ್ಲಪರ್ತಿ ಗ್ರಾಮದಲ್ಲಿ ಕ್ಲಿನಿಕ್ ನಡೆಸುತ್ತಿದ್ದರು. ಹಾಗಾಗಿ ಅವರ ವಿರುದ್ಧ ಶಿಸ್ತಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ಎಫ್ಐಆರ್ ಮಾಡಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಚಂದ್ರಾರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಕೋರ್ಲಪರ್ತಿ ಗ್ರಾಮದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದ ಕ್ಲಿನಿಕ್ಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಮಚಂದ್ರಾರೆಡ್ಡಿ ನೇತೃತ್ವದ ತಂಡ ಭೇಟಿ ನೀಡಿ ಸೋಮವಾರ ಬೀಗ ಜಡಿಯಲಾಗಿದೆ.</p>.<p>ಡಾ.ಶ್ರೀರಾಮ ರೆಡ್ಡಿ ಅವರ ವಿದ್ಯಾಭ್ಯಾಸದ ದಾಖಲಾತಿ ಪರಿಶೀಲಿಸಿದಾಗ ಅವರ ಬಳಿ ಯಾವುದೇ ದಾಖಲೆ ಹಾಗೂ ಪರವಾನಗಿ ಇಲ್ಲ. ಹಾಗಾಗಿ ಕೆಪಿಎಂಇ ಕಾಯ್ದೆ ಅಡಿಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ಪ್ರಾಥಮಿಕ ವರದಿ ಮಾಡಿ, ಕ್ಲಿನಿಕ್ ಬಂದ್ ಮಾಡಿರುವ ಬಗ್ಗೆ ತಿಳಿಸಲಾಗಿದೆ.</p>.<p>ಶ್ರೀರಾಮ ರೆಡ್ಡಿ ಈ ಮೊದಲು ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದದರು. ಅಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿ ಶಿಸ್ತಿನ ಕ್ರಮಕ್ಕೆ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಎಫ್ಐಆರ್ ಆಗಿದ್ದು, ₹ 25 ಸಾವಿರ ದಂಡ ವಿಧಿಸಲಾಗಿತ್ತು. ಆದರೆ, ಶ್ರೀರಾಮ ರೆಡ್ಡಿ ಯಾವುದೇ ದಂಡ ಪಾವತಿಸದೆ, ಮತ್ತೆ ಕೋರ್ಲಪರ್ತಿ ಗ್ರಾಮದಲ್ಲಿ ಕ್ಲಿನಿಕ್ ನಡೆಸುತ್ತಿದ್ದರು. ಹಾಗಾಗಿ ಅವರ ವಿರುದ್ಧ ಶಿಸ್ತಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ಎಫ್ಐಆರ್ ಮಾಡಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಚಂದ್ರಾರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>